ಹುಮನಾಬಾದ್: ಪಟ್ಟಣದ ಹೊರವಲಯದಲ್ಲಿ ಬಸವತೀರ್ಥ ಮಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜಮೀನಿನ ಉಳುಮೆಗಾಗಿ ಎರಡು ಟ್ರ್ಯಾಕ್ಟರ್ಗಳಿಗೆ ಪೂಜೆ ಸಲ್ಲಿಸಿದ ಬಳಿಕ ಸಿದ್ದಲಿಂಗ ಸ್ವಾಮೀಜಿ ಶುಕ್ರವಾರ ಗಾಳಿಯಲ್ಲಿ ಗುಂಡು ಹಾರಿಸಿದರು.
‘ಮಠಕ್ಕೆ ಸೇರಿದ ಜಮೀನುಗಳ ಉಳುಮೆ ನಡೆದಿದೆ. ಆದರೆ, ಮಠಕ್ಕೆ ಸೇರಿದ ಹೊಲಗಳ ಬದಿ ಇರುವ ಜಮೀನುಗಳನ್ನು ತಮ್ಮ ಅಧೀನಕ್ಕೆ ಪಡೆಯಲು ಸ್ವಾಮೀಜಿ ಈ ರೀತಿ ಮಾಡಿದ್ದಾರೆ. ನಾವು ಇದರ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ’ ಎಂದು ಕಲ್ಲೂರ್ ತಾಂಡಾದ ನಿವಾಸಿಗಳಾದ ಸೋಮಲು ನಾಯಕ ಅವರು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಇನ್ನೂ ಪ್ರಕರಣ ದಾಖಲಾಗಿಲ್ಲ.
ಘಟನೆ ಕುರಿತು ಪ್ರತಿಕ್ರಿಯೆ ಪಡೆಯಲು ಸ್ವಾಮೀಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರು ದೂರವಾಣಿ ಕರೆ ಸ್ವೀಕರಿಸಲಿಲ್ಲ.