<p>ಹುಮನಾಬಾದ್: ‘ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು’ ಎಂದು ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಣ್ಣ ಹನುಮಗೌಡ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಹುಮನಾಬಾದ್ ವಕೀಲರ ಸಂಘ, ಕಂದಾಯ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರಿಗೂ ಅವಶ್ಯ. ಮಾರಾಟಗಾರರಿಂದ ಆಗುವ ವಂಚನೆಯಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಎಂಬುದು ಸೇರಿದಂತೆ ಬೇರೆ ಬೇರೆ ವಿಷಯ ತಿಳಿಯುವುದು ಸೇರಿದಂತೆ ಜನಜಾಗೃತಿಗಾಗಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ’ ಎಂದರು.</p>.<p>ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕಿ ಸವಿತಾ, ಆಡಳಿತಾಧಿಕಾರಿ ಪರಮೇಶ್ವರಿ ಫುಲೇಕರ್, ಸರ್ಕಾರಿ ಸಹಾಯಕ ಅಭಿಯೋಜಕ ರವಿಕುಮಾರ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯಕುಮಾರ ಜೋತಗೊಂಡ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಾತೆ, ವೆಂಕಟರಾವ್, ಸಲಮಾನ್ ಅಲಿ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-33-1855319885</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ‘ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು’ ಎಂದು ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಣ್ಣ ಹನುಮಗೌಡ ಹೇಳಿದರು.</p>.<p>ಪಟ್ಟಣದ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಹುಮನಾಬಾದ್ ವಕೀಲರ ಸಂಘ, ಕಂದಾಯ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರಿಗೂ ಅವಶ್ಯ. ಮಾರಾಟಗಾರರಿಂದ ಆಗುವ ವಂಚನೆಯಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಎಂಬುದು ಸೇರಿದಂತೆ ಬೇರೆ ಬೇರೆ ವಿಷಯ ತಿಳಿಯುವುದು ಸೇರಿದಂತೆ ಜನಜಾಗೃತಿಗಾಗಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ’ ಎಂದರು.</p>.<p>ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕಿ ಸವಿತಾ, ಆಡಳಿತಾಧಿಕಾರಿ ಪರಮೇಶ್ವರಿ ಫುಲೇಕರ್, ಸರ್ಕಾರಿ ಸಹಾಯಕ ಅಭಿಯೋಜಕ ರವಿಕುಮಾರ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯಕುಮಾರ ಜೋತಗೊಂಡ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಾತೆ, ವೆಂಕಟರಾವ್, ಸಲಮಾನ್ ಅಲಿ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-33-1855319885</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>