ತಾಲ್ಲೂಕಿನ ದುಬಲಗುಂಡಿ, ಹಳ್ಳಿಖೇಡ್ ಬಿ. ಪಟ್ಟಣದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಬಳಿಕ ಮಾತನಾಡಿದ ಅವರು, ‘ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಸುಮಾರು 14 ಸಾವಿರ ಕ್ವಿಂಟಾಲ್ ಸೋಯಾ ಸೇರಿದಂತೆ ಉದ್ದು, ಹೆಸರು, ತೊಗರಿ, ಜೋಳ ಇದೆ. ಹೆಚ್ಚಿನ ಬೇಡಿಕೆ ಬಂದರೆ ತರಿಸಲಾಗುವುದು’ ಎಂದರು.