<p><strong>ಹುಮನಾಬಾದ್:</strong> ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತವಾಗಿದ್ದರಿಂದ ಅಪರಾಧಿಗಳಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಸ್ಥಳೀಯ ಜೆಎಂಎಫ್ಸಿ ನ್ಯಾಯಲಯ ನ್ಯಾಯಾಧೀಶರು ಆದೇಶಿಸಿದ್ದಾರೆ. </p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಎಸ್ಬಿಐ ಎಟಿಎಂನಲ್ಲಿನ ಹಣ 2024 ಮೇ 2ರಂದು ಕಳ್ಳತನವಾಗಿತ್ತು. ಈ ಬಗ್ಗೆ ಹಳ್ಳಿಖೇಡ್ ಬಿ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಹುಮನಾಬಾದ್ ಸಿಪಿಐ ಗುರು ಪಾಟೀಲ ತನಿಖೆ ಕೈಗೊಂಡು ಹರಿಯಾಣ ರಾಜ್ಯದ ಶಾಹಿದ್ ತಂದೆ ಕಮಲಖಾನ್, ಅಲೀಂ ಅಕ್ಬರ್, ಇಲಿಯಾಸ್ ಅಬ್ದುಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾಗಿತ್ತು. ಇದರಿಂದ ಹುಮನಾಬಾದ್ ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಣ್ಣಹನಮಗೌಡ ಅವರು ಅಪರಾಧಿಗಳಿಗೆ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20,000 ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶ್ರೀನಿವಾಸ , ಸುಭಾಷ ವಾದ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತವಾಗಿದ್ದರಿಂದ ಅಪರಾಧಿಗಳಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಸ್ಥಳೀಯ ಜೆಎಂಎಫ್ಸಿ ನ್ಯಾಯಲಯ ನ್ಯಾಯಾಧೀಶರು ಆದೇಶಿಸಿದ್ದಾರೆ. </p>.<p>ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಎಸ್ಬಿಐ ಎಟಿಎಂನಲ್ಲಿನ ಹಣ 2024 ಮೇ 2ರಂದು ಕಳ್ಳತನವಾಗಿತ್ತು. ಈ ಬಗ್ಗೆ ಹಳ್ಳಿಖೇಡ್ ಬಿ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಹುಮನಾಬಾದ್ ಸಿಪಿಐ ಗುರು ಪಾಟೀಲ ತನಿಖೆ ಕೈಗೊಂಡು ಹರಿಯಾಣ ರಾಜ್ಯದ ಶಾಹಿದ್ ತಂದೆ ಕಮಲಖಾನ್, ಅಲೀಂ ಅಕ್ಬರ್, ಇಲಿಯಾಸ್ ಅಬ್ದುಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾಗಿತ್ತು. ಇದರಿಂದ ಹುಮನಾಬಾದ್ ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಣ್ಣಹನಮಗೌಡ ಅವರು ಅಪರಾಧಿಗಳಿಗೆ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20,000 ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶ್ರೀನಿವಾಸ , ಸುಭಾಷ ವಾದ ಮಂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>