<p>ಬೀದರ್: ಪಾಪನಾಶ ಮಂದಿರದ ಒಳಗಡೆ ಇರುವ ದೇವಸ್ಥಾನದ ಹುಂಡಿ ಒಡೆದು ಕಳ್ಳರು ಮಂಗಳವಾರ ಬೆಳಗಿನ ಜಾವ ಹಣ ದೋಚಿಕೊಂಡು ಹೋಗಿದ್ದಾರೆ.</p>.<p>ಮೂರು ದಿನಗಳ ಹಿಂದೆ ಕಳ್ಳರು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದ ಕೇಬಲ್ ಕಟ್ ಮಾಡಿದ್ದಾರೆ. ಸೋಮವಾರ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಅಲ್ಲಿಯೇ ವಾಸ್ತವ್ಯ ಮಾಡಿದ್ದರು. ಮಂಗಳವಾರ ದೇವಸ್ಥಾನದಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.</p>.<p>ಸಮಯ ಸಾಧಿಸಿ ಕಳ್ಳರು ಹುಂಡಿಗೆ ಹಾಕಿದ ಬೀಗವನ್ನು ಕಲ್ಲಿನಿಂದ ಹೊಡೆದು ಮುರಿದು ನಗದು ದೋಚಿಕೊಂಡು ಹೋಗಿದ್ದಾರೆ.</p>.<p>ಧರ್ಮದತ್ತಿ ಇಲಾಖೆಗೆ ಸೇರಿದ ದೇವಸ್ಥಾನದ ಹುಂಡಿಯನ್ನು ಮೂರು ತಿಂಗಳಿಗೊಮ್ಮೆ ತೆರೆದು ಲೆಕ್ಕ ಮಾಡಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಸಾಮಾನ್ಯವಾಗಿ ₹ 2.50 ಲಕ್ಷದಿಂದ ₹ 3 ಲಕ್ಷ ಸಂಗ್ರಹವಾಗಿರುತ್ತದೆ. ಕಳ್ಳರು ಅಂದಾಜು ₹ 3 ಲಕ್ಷ ಕದ್ದೊಯ್ದಿರಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.</p>.<p class="Subhead">ಕಿರಾಣಿ ಅಂಗಡಿ ಕಳ್ಳತನಕ್ಕೆ ಯತ್ನ: ಗುಂಪಾದ ಮುಖ್ಯರಸ್ತೆಯ ಕಾಂಪ್ಲೆಕ್ಸ್ನಲ್ಲಿರುವ ಕಿರಣಾ ಅಂಗಡಿಯ ಗೋಡೆ ಹಾಗೂ ಶೆಟರ್ನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನ ನಡೆಸಲಾಗಿದೆ. ದೇವ್ ಕಿರಾಣಿ ಅಂಗಡಿ ಮಾಲೀಕ ಆಕಾಶ ರಾಜಕುಮಾರ ಗಾಂಧಿ ಗಂಜ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಪಾಪನಾಶ ಮಂದಿರದ ಒಳಗಡೆ ಇರುವ ದೇವಸ್ಥಾನದ ಹುಂಡಿ ಒಡೆದು ಕಳ್ಳರು ಮಂಗಳವಾರ ಬೆಳಗಿನ ಜಾವ ಹಣ ದೋಚಿಕೊಂಡು ಹೋಗಿದ್ದಾರೆ.</p>.<p>ಮೂರು ದಿನಗಳ ಹಿಂದೆ ಕಳ್ಳರು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದ ಕೇಬಲ್ ಕಟ್ ಮಾಡಿದ್ದಾರೆ. ಸೋಮವಾರ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಅಲ್ಲಿಯೇ ವಾಸ್ತವ್ಯ ಮಾಡಿದ್ದರು. ಮಂಗಳವಾರ ದೇವಸ್ಥಾನದಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.</p>.<p>ಸಮಯ ಸಾಧಿಸಿ ಕಳ್ಳರು ಹುಂಡಿಗೆ ಹಾಕಿದ ಬೀಗವನ್ನು ಕಲ್ಲಿನಿಂದ ಹೊಡೆದು ಮುರಿದು ನಗದು ದೋಚಿಕೊಂಡು ಹೋಗಿದ್ದಾರೆ.</p>.<p>ಧರ್ಮದತ್ತಿ ಇಲಾಖೆಗೆ ಸೇರಿದ ದೇವಸ್ಥಾನದ ಹುಂಡಿಯನ್ನು ಮೂರು ತಿಂಗಳಿಗೊಮ್ಮೆ ತೆರೆದು ಲೆಕ್ಕ ಮಾಡಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಸಾಮಾನ್ಯವಾಗಿ ₹ 2.50 ಲಕ್ಷದಿಂದ ₹ 3 ಲಕ್ಷ ಸಂಗ್ರಹವಾಗಿರುತ್ತದೆ. ಕಳ್ಳರು ಅಂದಾಜು ₹ 3 ಲಕ್ಷ ಕದ್ದೊಯ್ದಿರಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.</p>.<p class="Subhead">ಕಿರಾಣಿ ಅಂಗಡಿ ಕಳ್ಳತನಕ್ಕೆ ಯತ್ನ: ಗುಂಪಾದ ಮುಖ್ಯರಸ್ತೆಯ ಕಾಂಪ್ಲೆಕ್ಸ್ನಲ್ಲಿರುವ ಕಿರಣಾ ಅಂಗಡಿಯ ಗೋಡೆ ಹಾಗೂ ಶೆಟರ್ನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನ ನಡೆಸಲಾಗಿದೆ. ದೇವ್ ಕಿರಾಣಿ ಅಂಗಡಿ ಮಾಲೀಕ ಆಕಾಶ ರಾಜಕುಮಾರ ಗಾಂಧಿ ಗಂಜ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>