ಚಿಟಗುಪ್ಪ: ತಾಲ್ಲೂಕಿನ ರಾಮಪುರ ಗ್ರಾಮದಲ್ಲಿ ಪತಿಯ ಮಾನಸಿಕ ಹಿಂಸೆಗೆ ಬೇಸತ್ತು ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಗ್ರಾಮದ ಅನುರಾಧಾ ರಮೇಶ ಬೆನಕಿಪಳ್ಳಿ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
‘ಕಳೆದ ಹಲವು ವರ್ಷಗಳಿಂದ ಮಾನಸಿಕ ಹಿಂಸೆ ನೀಡುತ್ತಿರುವುದರಿಂದ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಪಟ್ಟಣ ಠಾಣೆಗೆ ಮೃತಳ ತಾಯಿ ಸಲ್ಲಿಸಿದ ದೂರಿನನ್ವಯ ಸಬ್ ಇನ್ಸ್ಪೆಕ್ಟರ್ ಮಹಾಂತೇಶ್ ಪ್ರಕರಣ ದಾಖಲಿಸಿದ್ದಾರೆ.