<p><strong>ಬೀದರ್: </strong>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೀದರ್ ಘಟಕದ ಪದಾಧಿಕಾರಿಗಳು ಪದ್ಮಶ್ರೀ ಪುರಸ್ಕೃತ ಶಾ ರಶೀದ್ ಅಹ್ಮದ್ ಖಾದ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.</p>.<p>ಶಾ ರಶಿದ್ ಅಹ್ಮದ್ ಖಾದ್ರಿ ಮಾತನಾಡಿ,‘2014ರವರೆಗೆ ಐದು ವರ್ಷ ನಿರಂತರವಾಗಿ ₹ 12,000 ಖರ್ಚು ಮಾಡಿ ಕೇಂದ್ರಕ್ಕೆ ಅರ್ಜಿ ಸಲ್ಲಿಸಿದ್ದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಮರಿಗೆ ಪ್ರಶಸ್ತಿ ಸಿಗಲು ಸಾಧ್ಯವಿಲ್ಲ ಎಂದು ಭಾವಿಸಿ ಅರ್ಜಿ ಸಲ್ಲಿಸುವುದನ್ನು ನಿಲ್ಲಿಸಿದ್ದೆ’ ಎಂದರು.</p>.<p>‘ನಾನು ಯಾವುದೇ ಅರ್ಜಿ ಸಲ್ಲಿಸದಿದ್ದರೂ ಬಿಜೆಪಿ ಸರ್ಕಾರ ನನ್ನ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಇದಕ್ಕೂ ಮಿಗಿಲಾಗಿ ಸಂಘದ ಕಾರ್ಯಕರ್ತರು ನಮ್ಮ ಮನೆಗೆ ಬಂದು ನನಗೆ ಅಭಿನಂದಿಸಿದ್ದು ಸಂತಸ ತಂದಿದೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ವಿಭಾಗ ಪ್ರಚಾರಕ ವಿಜಯ ಮಾಂತೇಶ, ಕೃಷ್ಣ ರೆಡ್ಡಿ, ಜಿಲ್ಲಾ ಕಾರ್ಯವಾಹ ಭಾರ್ಗವಾಚಾರಿ ಜಿಲ್ಲಾ ವ್ಯವಸ್ಥಾ ಪ್ರಮುಖ ಬಸವರಾಜ ನಿಂಬುರೆ ಹಾಗೂ ನಗರ ಪ್ರಚಾರಕ ಹನುಮಂತ ಒಂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೀದರ್ ಘಟಕದ ಪದಾಧಿಕಾರಿಗಳು ಪದ್ಮಶ್ರೀ ಪುರಸ್ಕೃತ ಶಾ ರಶೀದ್ ಅಹ್ಮದ್ ಖಾದ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.</p>.<p>ಶಾ ರಶಿದ್ ಅಹ್ಮದ್ ಖಾದ್ರಿ ಮಾತನಾಡಿ,‘2014ರವರೆಗೆ ಐದು ವರ್ಷ ನಿರಂತರವಾಗಿ ₹ 12,000 ಖರ್ಚು ಮಾಡಿ ಕೇಂದ್ರಕ್ಕೆ ಅರ್ಜಿ ಸಲ್ಲಿಸಿದ್ದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಮರಿಗೆ ಪ್ರಶಸ್ತಿ ಸಿಗಲು ಸಾಧ್ಯವಿಲ್ಲ ಎಂದು ಭಾವಿಸಿ ಅರ್ಜಿ ಸಲ್ಲಿಸುವುದನ್ನು ನಿಲ್ಲಿಸಿದ್ದೆ’ ಎಂದರು.</p>.<p>‘ನಾನು ಯಾವುದೇ ಅರ್ಜಿ ಸಲ್ಲಿಸದಿದ್ದರೂ ಬಿಜೆಪಿ ಸರ್ಕಾರ ನನ್ನ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಇದಕ್ಕೂ ಮಿಗಿಲಾಗಿ ಸಂಘದ ಕಾರ್ಯಕರ್ತರು ನಮ್ಮ ಮನೆಗೆ ಬಂದು ನನಗೆ ಅಭಿನಂದಿಸಿದ್ದು ಸಂತಸ ತಂದಿದೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ವಿಭಾಗ ಪ್ರಚಾರಕ ವಿಜಯ ಮಾಂತೇಶ, ಕೃಷ್ಣ ರೆಡ್ಡಿ, ಜಿಲ್ಲಾ ಕಾರ್ಯವಾಹ ಭಾರ್ಗವಾಚಾರಿ ಜಿಲ್ಲಾ ವ್ಯವಸ್ಥಾ ಪ್ರಮುಖ ಬಸವರಾಜ ನಿಂಬುರೆ ಹಾಗೂ ನಗರ ಪ್ರಚಾರಕ ಹನುಮಂತ ಒಂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>