<p><strong>ಬೀದರ್:</strong> ‘ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್ ಉಚಿತವಾಗಿ ಕೊಡಿಸುವೆ’ ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ ತಿಳಿಸಿದರು.</p>.<p>ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ, ರೈತರಿಗೆ ಮಾಸಿಕ ₹2 ಸಾವಿರ, ಶಿಕ್ಷಿತ ನಿರುದ್ಯೋಗಿ ಯುವಕರಿಗೆ ಮಾಸಿಕ ಉದ್ಯೋಗ ಭತ್ಯೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಶ್ರಮಿಸುವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ಜನ ಬೇಸತ್ತು ಹೋಗಿದ್ದಾರೆ. ಬದಲಾವಣೆ ಬಯಸಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಜನಸೇವೆ ಮಾಡುವ ಅಭ್ಯರ್ಥಿಯನ್ನು ಕ್ಷೇತ್ರದ ಮತದಾರರು ಆಯ್ಕೆ ಮಾಡಬೇಕು. ಸಂಸದರ ವೇತನದಿಂದ ಮಾಸಿಕ ಸಾಂಕೇತಿಕವಾಗಿ ₹5 ಪಡೆದು, ಮಿಕ್ಕುಳಿದ ಹಣವನ್ನು ಜನಕಲ್ಯಾಣಕ್ಕೆ ಬಳಸುವೆ ಎಂದರು.</p>.<p>ನನ್ನ ಕ್ರಮ ಸಂಖ್ಯೆ 14 ಆಗಿದ್ದು, ಗ್ಯಾಸ್ ಸಿಲಿಂಡರ್ ನನಗೆ ನೀಡಿರುವ ಚಿಹ್ನೆ. ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಕೊಟ್ಟು ಗೆಲ್ಲಿಸಿದರೆ ಜನಪರವಾದ ಕೆಲಸಗಳನ್ನು ಮಾಡುವೆ ಎಂದು ಹೇಳಿದರು.</p>.<p>ಪ್ರಮುಖರಾದ ಅಶೋಕ ನಾಯಕ, ಮುರಳಿಧರ ಜಾಧವ, ವೀರಭದ್ರ ಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್ ಉಚಿತವಾಗಿ ಕೊಡಿಸುವೆ’ ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ ತಿಳಿಸಿದರು.</p>.<p>ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ, ರೈತರಿಗೆ ಮಾಸಿಕ ₹2 ಸಾವಿರ, ಶಿಕ್ಷಿತ ನಿರುದ್ಯೋಗಿ ಯುವಕರಿಗೆ ಮಾಸಿಕ ಉದ್ಯೋಗ ಭತ್ಯೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಶ್ರಮಿಸುವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ಜನ ಬೇಸತ್ತು ಹೋಗಿದ್ದಾರೆ. ಬದಲಾವಣೆ ಬಯಸಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಜನಸೇವೆ ಮಾಡುವ ಅಭ್ಯರ್ಥಿಯನ್ನು ಕ್ಷೇತ್ರದ ಮತದಾರರು ಆಯ್ಕೆ ಮಾಡಬೇಕು. ಸಂಸದರ ವೇತನದಿಂದ ಮಾಸಿಕ ಸಾಂಕೇತಿಕವಾಗಿ ₹5 ಪಡೆದು, ಮಿಕ್ಕುಳಿದ ಹಣವನ್ನು ಜನಕಲ್ಯಾಣಕ್ಕೆ ಬಳಸುವೆ ಎಂದರು.</p>.<p>ನನ್ನ ಕ್ರಮ ಸಂಖ್ಯೆ 14 ಆಗಿದ್ದು, ಗ್ಯಾಸ್ ಸಿಲಿಂಡರ್ ನನಗೆ ನೀಡಿರುವ ಚಿಹ್ನೆ. ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಕೊಟ್ಟು ಗೆಲ್ಲಿಸಿದರೆ ಜನಪರವಾದ ಕೆಲಸಗಳನ್ನು ಮಾಡುವೆ ಎಂದು ಹೇಳಿದರು.</p>.<p>ಪ್ರಮುಖರಾದ ಅಶೋಕ ನಾಯಕ, ಮುರಳಿಧರ ಜಾಧವ, ವೀರಭದ್ರ ಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>