<p><strong>ಬೀದರ್:</strong> ‘ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವೆ’ ಎಂದು ಪಕ್ಷೇತರ ಅಭ್ಯರ್ಥಿ ಗೋಪಾಲ ಎಂ.ಪಿ. ಗಾರಂಪಳ್ಳಿ ಭರವಸೆ ನೀಡಿದರು.</p>.<p>ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ಹಾಕಿಕೊಂಡಿರುವೆ. ಒಂದು ಬಾರಿ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬ ರಾಜಕಾರಣ ಅಭಿವೃದ್ಧಿ ಮಾಡುತ್ತಿದ್ದಾರೆ. ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಸಾಧನೆ ಶೂನ್ಯ. ಕೇವಲ ಕುರ್ಚಿಗಳನ್ನು ಹಾಕಿದ್ದೆ ಇವರ ಸಾಧನೆಯಾಗಿದೆ’ ಎಂದು ಟೀಕಿಸಿದರು. </p>.<p>‘ಜಗತ್ತಿಗೆ ಪ್ರಥಮ ಸಂಸತ್ ನೀಡಿದ ನಾಡು ಇದು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಸಮಾಜ ನಿರ್ಮಿಸಿ ಮಾದರಿಯಾಗಿದ್ದರು. ಆದರೆ, ಪ್ರಸ್ತುತ ಈ ನಾಡಿನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದರು.</p>.<p>ಮಾರುತಿ ಗಂದಿಗಿರಾ, ಗಿರಿಮಲ್ಲಪ್ಪ ಹಸನಗುಂಡಗಿ, ರೇವಣಸಿದ್ದಪ್ಪ ಸುಬೇದಾರ್, ಮೌನೇಶ್ ಗಾರಂಪಳ್ಳಿ, ಸುಭಾಷ ತಾಡಪಳ್ಳಿ, ಅಶ್ವಿನಕುಮಾರ ಭರಂ, ಪ್ರತಾಪ ಗೌಡನಹಳ್ಳಿ, ವಿಜಯಕುಮಾರ ತಾಡಪಳ್ಳಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ಬೀದರ್ ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವೆ’ ಎಂದು ಪಕ್ಷೇತರ ಅಭ್ಯರ್ಥಿ ಗೋಪಾಲ ಎಂ.ಪಿ. ಗಾರಂಪಳ್ಳಿ ಭರವಸೆ ನೀಡಿದರು.</p>.<p>ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ಹಾಕಿಕೊಂಡಿರುವೆ. ಒಂದು ಬಾರಿ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬ ರಾಜಕಾರಣ ಅಭಿವೃದ್ಧಿ ಮಾಡುತ್ತಿದ್ದಾರೆ. ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಸಾಧನೆ ಶೂನ್ಯ. ಕೇವಲ ಕುರ್ಚಿಗಳನ್ನು ಹಾಕಿದ್ದೆ ಇವರ ಸಾಧನೆಯಾಗಿದೆ’ ಎಂದು ಟೀಕಿಸಿದರು. </p>.<p>‘ಜಗತ್ತಿಗೆ ಪ್ರಥಮ ಸಂಸತ್ ನೀಡಿದ ನಾಡು ಇದು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಸಮಾಜ ನಿರ್ಮಿಸಿ ಮಾದರಿಯಾಗಿದ್ದರು. ಆದರೆ, ಪ್ರಸ್ತುತ ಈ ನಾಡಿನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದರು.</p>.<p>ಮಾರುತಿ ಗಂದಿಗಿರಾ, ಗಿರಿಮಲ್ಲಪ್ಪ ಹಸನಗುಂಡಗಿ, ರೇವಣಸಿದ್ದಪ್ಪ ಸುಬೇದಾರ್, ಮೌನೇಶ್ ಗಾರಂಪಳ್ಳಿ, ಸುಭಾಷ ತಾಡಪಳ್ಳಿ, ಅಶ್ವಿನಕುಮಾರ ಭರಂ, ಪ್ರತಾಪ ಗೌಡನಹಳ್ಳಿ, ವಿಜಯಕುಮಾರ ತಾಡಪಳ್ಳಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>