<p><strong>ಔರಾದ್:</strong> ‘ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟರ ಪಟ್ಟಿಯಿಂದ ಕೈಬಿಟ್ಟರೆ ಪ್ರತಿರೋಧ ಎದುರಿಸಬೇಕಾಗುತ್ತದೆ’ ಎಂದು ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಶಿನಾಥರಾವ ಜಾಧವ, ಪಟ್ಟಣ ಪಂಚಾಯಿತಿ ಸದಸ್ಯ ಸಂಜೀವ ವಡೆಯರ್, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ರಾಠೋಡ, ನಾಗನಾಥ ಸಾಡಗಂಗಲೆ ಹಾಗೂ ಬಾಳು ರಾಠೋಡ ಸೇರಿದಂತೆ ಹಲವರು ಮಂಗಳವಾರ ಸಭೆ ನಡೆಸಿದರು. ಈ ವಿಷಯದ ಕುರಿತು ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಿದರು.</p>.<p>‘ಲಂಬಾಣಿ, ವಡೆಯರ್ ಸೇರಿದಂತೆ ನಾಲ್ಕು ಜಾತಿಗಳನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯಲು ಕೆಲವರು ಹುನ್ನಾರ ನಡೆಸಿದ್ದಾರೆ. ಈ ಕುರಿತು ಕೋರ್ಟ್ ಸರ್ಕಾರದ ಅಭಿಪ್ರಾಯ ಕೇಳಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಾಲ್ಕು ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ವಾಸ್ತವ ಮಾಹಿತಿ ನೀಡಬೇಕು’ ಎಂದು ವಡೆಯರ್ ಸಮಾಜದ ಧುರೀಣ ನಾಗನಾಥ ಸಾಡಂಗಲೆ ಹೇಳಿದರು.</p>.<p>‘ಲಂಬಾಣಿ ಸೇರಿದಂತೆ ಈ ನಾಲ್ಕು ಜಾತಿ ಜನ ಈಗಲೂ ಕನಿಷ್ಠ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಬೆರಳಣಿಕೆ ಜನರ ಸ್ಥಿತಿ ನೋಡಿ ಇಡೀ ಸಮಯದಾಯ ಸೌಲಭ್ಯದಿಂದ ವಂಚಿಸುವುದು ಕಾನೂನು ಬಾಹಿರವಾಗುತ್ತದೆ’ ಎಂದು ಕಾಶಿನಾಥರಾವ ಜಾಧವ ತಿಳಿಸಿದರು.</p>.<p>ಈ ವಿಷಯದಲ್ಲಿ ಸರ್ಕಾರದ ಗಮನ ಸೆಳೆಯಲು ನಾಳೆಯಿಂದ ರಾಜ್ಯಾದ್ಯಂತ ಪತ್ರ ಚಳವಳಿ ನಡೆಯಲಿದೆ. ತಾಲ್ಲೂಕಿನಿಂದ 25 ಸಾವಿರ ಪತ್ರಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ಲಂಬಾಣಿ, ಭೋವಿ, ಕೊರಚ ಹಾಗೂ ಕೊರಮ ಜಾತಿಗಳನ್ನು ಪರಿಶಿಷ್ಟರ ಪಟ್ಟಿಯಿಂದ ಕೈಬಿಟ್ಟರೆ ಪ್ರತಿರೋಧ ಎದುರಿಸಬೇಕಾಗುತ್ತದೆ’ ಎಂದು ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಶಿನಾಥರಾವ ಜಾಧವ, ಪಟ್ಟಣ ಪಂಚಾಯಿತಿ ಸದಸ್ಯ ಸಂಜೀವ ವಡೆಯರ್, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ರಾಠೋಡ, ನಾಗನಾಥ ಸಾಡಗಂಗಲೆ ಹಾಗೂ ಬಾಳು ರಾಠೋಡ ಸೇರಿದಂತೆ ಹಲವರು ಮಂಗಳವಾರ ಸಭೆ ನಡೆಸಿದರು. ಈ ವಿಷಯದ ಕುರಿತು ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಿದರು.</p>.<p>‘ಲಂಬಾಣಿ, ವಡೆಯರ್ ಸೇರಿದಂತೆ ನಾಲ್ಕು ಜಾತಿಗಳನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯಲು ಕೆಲವರು ಹುನ್ನಾರ ನಡೆಸಿದ್ದಾರೆ. ಈ ಕುರಿತು ಕೋರ್ಟ್ ಸರ್ಕಾರದ ಅಭಿಪ್ರಾಯ ಕೇಳಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಾಲ್ಕು ಜಾತಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ವಾಸ್ತವ ಮಾಹಿತಿ ನೀಡಬೇಕು’ ಎಂದು ವಡೆಯರ್ ಸಮಾಜದ ಧುರೀಣ ನಾಗನಾಥ ಸಾಡಂಗಲೆ ಹೇಳಿದರು.</p>.<p>‘ಲಂಬಾಣಿ ಸೇರಿದಂತೆ ಈ ನಾಲ್ಕು ಜಾತಿ ಜನ ಈಗಲೂ ಕನಿಷ್ಠ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಬೆರಳಣಿಕೆ ಜನರ ಸ್ಥಿತಿ ನೋಡಿ ಇಡೀ ಸಮಯದಾಯ ಸೌಲಭ್ಯದಿಂದ ವಂಚಿಸುವುದು ಕಾನೂನು ಬಾಹಿರವಾಗುತ್ತದೆ’ ಎಂದು ಕಾಶಿನಾಥರಾವ ಜಾಧವ ತಿಳಿಸಿದರು.</p>.<p>ಈ ವಿಷಯದಲ್ಲಿ ಸರ್ಕಾರದ ಗಮನ ಸೆಳೆಯಲು ನಾಳೆಯಿಂದ ರಾಜ್ಯಾದ್ಯಂತ ಪತ್ರ ಚಳವಳಿ ನಡೆಯಲಿದೆ. ತಾಲ್ಲೂಕಿನಿಂದ 25 ಸಾವಿರ ಪತ್ರಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗುವುದು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>