<p><strong>ಬೀದರ್</strong>: ರೈತರ ಹಿತ ರಕ್ಷಿಸಲು ಸಾಧ್ಯವಾಗದಿದ್ದರೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಬೇಕು ಎಂದು ಹಿರಿಯ ವಕೀಲ ಕಿಶನರಾವ್ ಸಾಯಗಾಂವಕರ್ ಒತ್ತಾಯಿಸಿದ್ದಾರೆ.</p>.<p>ನೆರೆಯ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹. 2,500 ಬೆಲೆ ಪಾವತಿಸುತ್ತಿರುವಾಗ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ₹ 2,000 ಮಾತ್ರ ಕೊಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.</p>.<p>ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಎಫ್ಆರ್ಪಿ ಪ್ರಕಾರ ಕಬ್ಬು ಸಾಗಿಸಿದ ರೈತರಿಗೆ ಕಬ್ಬು ಹಣ ಪಾವತಿಸಲಾಗಿದೆ ಎಂದು ಹೇಳಿದ್ದಾರೆ. ಎಫ್ಆರ್ಪಿ ಅನ್ವಯ ಹೇಗೆ ಹಣ ಸಂದಾಯ ಮಾಡಲಾಗಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.</p>.<p>ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಸಕ್ಕರೆ ಬೆಲೆ ₹ 4 ಸಾವಿರ ಇದೆ. ಕಬ್ಬು ಕಟಾವು, ಸಾಗಣೆ, ಸಕ್ಕರೆ ಉತ್ಪಾದನೆ ವೆಚ್ಚ ತೆಗೆದು, ಕಾರ್ಖಾನೆಗೆ ಒಂದಿಷ್ಟು ಲಾಭ ಉಳಿಸಿಕೊಂಡರೂ ಪ್ರತಿ ಟನ್ ಕಬ್ಬಿಗೆ ₹ 2,500 ಬೆಲೆ ಪಾವತಿಸಬಹುದು ಎಂದು ತಿಳಿಸಿದ್ದಾರೆ.</p>.<p>ಕಳೆದ ವರ್ಷ ಜನಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲೇ ಪ್ರತಿ ಟನ್ ಕಬ್ಬಿಗೆ ₹ 2,400 ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ನಂತರ ರೈತರಿಗೆ ಪ್ರತಿ ಟನ್ಗೆ ₹ 1,950 ಮಾತ್ರ ಪಾವತಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಒಂದೆಡೆ ಕಬ್ಬಿಗೆ ಯೋಗ್ಯ ಬೆಲೆ ಕೊಡುತ್ತಿಲ್ಲ. ಮತ್ತೊಂದೆಡೆ ನಿಯಮ ಪ್ರಕಾರ ಎರಡು ವಾರಗಳಲ್ಲಿ ಕಬ್ಬು ಹಣ ಸಂದಾಯ ಸಹ ಮಾಡುತ್ತಿಲ್ಲ. ಮೂರು ತಿಂಗಳ ನಂತರ ಬಿಲ್ ಪಾವತಿಸಲಾಗುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಆಡಳಿತ ಮಂಡಳಿಗಳಿಂದ ರೈತರ ಹಿತಕ್ಕೆ ಪೂರಕವಾಗಿ ಕಾರ್ಖಾನೆ ಮುನ್ನಡೆಸಲು ಆಗದಿದ್ದರೆ, ಸರ್ಕಾರ ಕೂಡಲೇ ಕಾರ್ಖಾನೆಗಳನ್ನು ವಶಕ್ಕೆ ಪಡೆಯಬೇಕು. ಆಡಳಿತಾಧಿಕಾರಿ ನೇಮಕ ಮಾಡಿ, ರೈತರ ಕಬ್ಬಿಗೆ ಯೋಗ್ಯ ಬೆಲೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರೈತರ ಹಿತ ರಕ್ಷಿಸಲು ಸಾಧ್ಯವಾಗದಿದ್ದರೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಬೇಕು ಎಂದು ಹಿರಿಯ ವಕೀಲ ಕಿಶನರಾವ್ ಸಾಯಗಾಂವಕರ್ ಒತ್ತಾಯಿಸಿದ್ದಾರೆ.</p>.<p>ನೆರೆಯ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹. 2,500 ಬೆಲೆ ಪಾವತಿಸುತ್ತಿರುವಾಗ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ₹ 2,000 ಮಾತ್ರ ಕೊಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.</p>.<p>ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಎಫ್ಆರ್ಪಿ ಪ್ರಕಾರ ಕಬ್ಬು ಸಾಗಿಸಿದ ರೈತರಿಗೆ ಕಬ್ಬು ಹಣ ಪಾವತಿಸಲಾಗಿದೆ ಎಂದು ಹೇಳಿದ್ದಾರೆ. ಎಫ್ಆರ್ಪಿ ಅನ್ವಯ ಹೇಗೆ ಹಣ ಸಂದಾಯ ಮಾಡಲಾಗಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.</p>.<p>ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಸಕ್ಕರೆ ಬೆಲೆ ₹ 4 ಸಾವಿರ ಇದೆ. ಕಬ್ಬು ಕಟಾವು, ಸಾಗಣೆ, ಸಕ್ಕರೆ ಉತ್ಪಾದನೆ ವೆಚ್ಚ ತೆಗೆದು, ಕಾರ್ಖಾನೆಗೆ ಒಂದಿಷ್ಟು ಲಾಭ ಉಳಿಸಿಕೊಂಡರೂ ಪ್ರತಿ ಟನ್ ಕಬ್ಬಿಗೆ ₹ 2,500 ಬೆಲೆ ಪಾವತಿಸಬಹುದು ಎಂದು ತಿಳಿಸಿದ್ದಾರೆ.</p>.<p>ಕಳೆದ ವರ್ಷ ಜನಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲೇ ಪ್ರತಿ ಟನ್ ಕಬ್ಬಿಗೆ ₹ 2,400 ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ನಂತರ ರೈತರಿಗೆ ಪ್ರತಿ ಟನ್ಗೆ ₹ 1,950 ಮಾತ್ರ ಪಾವತಿಸಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಒಂದೆಡೆ ಕಬ್ಬಿಗೆ ಯೋಗ್ಯ ಬೆಲೆ ಕೊಡುತ್ತಿಲ್ಲ. ಮತ್ತೊಂದೆಡೆ ನಿಯಮ ಪ್ರಕಾರ ಎರಡು ವಾರಗಳಲ್ಲಿ ಕಬ್ಬು ಹಣ ಸಂದಾಯ ಸಹ ಮಾಡುತ್ತಿಲ್ಲ. ಮೂರು ತಿಂಗಳ ನಂತರ ಬಿಲ್ ಪಾವತಿಸಲಾಗುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಆಡಳಿತ ಮಂಡಳಿಗಳಿಂದ ರೈತರ ಹಿತಕ್ಕೆ ಪೂರಕವಾಗಿ ಕಾರ್ಖಾನೆ ಮುನ್ನಡೆಸಲು ಆಗದಿದ್ದರೆ, ಸರ್ಕಾರ ಕೂಡಲೇ ಕಾರ್ಖಾನೆಗಳನ್ನು ವಶಕ್ಕೆ ಪಡೆಯಬೇಕು. ಆಡಳಿತಾಧಿಕಾರಿ ನೇಮಕ ಮಾಡಿ, ರೈತರ ಕಬ್ಬಿಗೆ ಯೋಗ್ಯ ಬೆಲೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>