ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ, ಮುಖಂಡ ರಾಮಣ್ಣ ಒಡೆಯರ್, ಆನಂದ ಚವಾಣ್, ಶಿವರಾಜ ದೇಶಮುಖ ಅವರು ಮಂಗಳವಾರ ಇಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ನೌಕರಿ ಕೊಡಿಸುವುದಾಗಿ ಅನೇಕ ಯುವಕರ ಬಳಿ ಹಣ ಪಡೆದು ವಂಚಿಸಲಾಗಿದೆ. ಇದರ ಹಿಂದೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅವರ ಈ ಹಿಂದಿನ ಆಪ್ತ ಸಹಾಯಕ ಬಾಗಲಕೋಟೆ ಜಿಲ್ಲೆಯ ಜ್ಞಾನದೇವ ಜಾಧವ ಇದ್ದಾರೆ. ಅವರ ವಿರುದ್ಧ ಈಗಾಗಲೇ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಹೇಳಿದರು.