<p>ಬೀದರ್: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ಒತ್ತಾಯಿಸಿದ್ದಾರೆ.</p>.<p>ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಗೊತ್ತುಪಡಿಸಲಾಗಿದೆ. ಹೊಲೆಯ ಸಮುದಾಯಕ್ಕೆ ಶೇ 5 ರಷ್ಟು ಹಾಗೂ ಮಾದಿಗ ಸಮುದಾಯಕ್ಕೆ ಶೇಕಡ 6 ರಷ್ಟು, ಇನ್ನುಳಿದ ಜಾತಿಗಳಿಗೆ ನ್ಯಾಯಯುತವಾಗಿ ಅವರವರ ಜಾತಿಯ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರೆಯಲಿದೆ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಪರಿಶಿಷ್ಟರ ಪಟ್ಟಿಯಲ್ಲಿರುವ ಸ್ಪೃಶ್ಯ ಜಾತಿಗಳು ಮೀಸಲಾತಿಯನ್ನು ಅಧಿಕ ಪ್ರಮಾಣದಲ್ಲಿ ಕಬಳಿಸುತ್ತಿವೆ. ಅಸ್ಪೃಶ್ಯರಿಗೆ ದಕ್ಕಬೇಕಿದ್ದ ಯೋಜನೆಗಳನ್ನು ಕಬಳಿಸಿವೆ. ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಿವೆ. ಆಯೋಗದ ವರದಿ ಜಾರಿಗೆ ಬಂದರೆ ಎಲ್ಲ ಜಾತಿಗಳಿಗೆ ನ್ಯಾಯ ದೊರಕಲಿದೆ ಎಂದು ತಿಳಿಸಿದ್ದಾರೆ.</p>.<p>ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದರೆ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಗೋರನಾಳಕರ್ ಒತ್ತಾಯಿಸಿದ್ದಾರೆ.</p>.<p>ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಗೊತ್ತುಪಡಿಸಲಾಗಿದೆ. ಹೊಲೆಯ ಸಮುದಾಯಕ್ಕೆ ಶೇ 5 ರಷ್ಟು ಹಾಗೂ ಮಾದಿಗ ಸಮುದಾಯಕ್ಕೆ ಶೇಕಡ 6 ರಷ್ಟು, ಇನ್ನುಳಿದ ಜಾತಿಗಳಿಗೆ ನ್ಯಾಯಯುತವಾಗಿ ಅವರವರ ಜಾತಿಯ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರೆಯಲಿದೆ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಪರಿಶಿಷ್ಟರ ಪಟ್ಟಿಯಲ್ಲಿರುವ ಸ್ಪೃಶ್ಯ ಜಾತಿಗಳು ಮೀಸಲಾತಿಯನ್ನು ಅಧಿಕ ಪ್ರಮಾಣದಲ್ಲಿ ಕಬಳಿಸುತ್ತಿವೆ. ಅಸ್ಪೃಶ್ಯರಿಗೆ ದಕ್ಕಬೇಕಿದ್ದ ಯೋಜನೆಗಳನ್ನು ಕಬಳಿಸಿವೆ. ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಿವೆ. ಆಯೋಗದ ವರದಿ ಜಾರಿಗೆ ಬಂದರೆ ಎಲ್ಲ ಜಾತಿಗಳಿಗೆ ನ್ಯಾಯ ದೊರಕಲಿದೆ ಎಂದು ತಿಳಿಸಿದ್ದಾರೆ.</p>.<p>ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದರೆ ಅಸ್ಪೃಶ್ಯರಿಗೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>