ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ: ಅನಿಲಕುಮಾರ ಮೇಲ್ದೊಡ್ಡಿ

ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ
Last Updated 1 ನವೆಂಬರ್ 2021, 8:27 IST
ಅಕ್ಷರ ಗಾತ್ರ

ಬೀದರ್: ಕನ್ನಡಿಗರೆಲ್ಲರೂ ಕನ್ನಡ ಭಾಷೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಹೇಳಿದರು.

ಇಲ್ಲಿಯ ಪ್ರತಾಪನಗರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ನಾಡು, ನುಡಿ, ಸಂಸ್ಕøತಿಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ನುಡಿದರು.

ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನದ ಮೂಲಕ ರಾಜ್ಯ ಸರ್ಕಾರ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದೆ ಎಂದು ತಿಳಿಸಿದರು.

ಕಚೇರಿ ಅಧೀಕ್ಷಕ ರಮೇಶ ಗೋಖಲೆ, ಪ್ರಥಮ ದರ್ಜೆ ಸಹಾಯಕಿ ಮಹಾದೇವಿ, ದ್ವಿತೀಯ ದರ್ಜೆ ಸಹಾಯಕರಾದ ರತನ್ ಸಿಂಗ್, ಅಂಬಾದಾಸ, ಬೆರಳಚ್ಚುಗಾರ್ತಿ ಅನಿತಾ, ಹಣಮಂತ, ಸ್ವಾಮಿದಾಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT