<p><strong>ಬೀದರ್:</strong> ಗುರುನಾನಕ ಶಿಕ್ಷಣ ಸಂಸ್ಥೆ ಹಾಗೂ ಗುರುದ್ವಾರ ಸಿಬ್ಬಂದಿಗೆ ಕೋವಿಡ್ ಲಸಿಕೆ ಉಚಿತವಾಗಿ ಕೊಡಲಾಗುವುದು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಘೋಷಿಸಿದರು.</p>.<p>ಇಲ್ಲಿಯ ಗುರುನಾನಕ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಕೋವಿಡ್ ಲಸಿಕಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ನೆರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಲು ಗುರುನಾನಕ ಆಸ್ಪತ್ರೆಯಲ್ಲಿ ಡಯಾಲಸಿಸ್ ಕೇಂದ್ರ, ಕ್ಯಾಟ್ ಲ್ಯಾಬ್ ಸೇರಿದಂತೆ ಅಗತ್ಯ ಅತ್ಯಾಧುನಿಕ ವೈದ್ಯಕೀಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮಾರ್ಚ್ 3 ರಂದು ನ್ಯೂರೊ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.</p>.<p>ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಕೋವಿಡ್ ಸಂಪೂರ್ಣ ತೊಲಗುವವರೆಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರವನ್ನು ಉದ್ಘಾಟಿಸಿದ ಶಾಸಕ ರಹೀಂಖಾನ್ ತಿಳಿಸಿದರು.</p>.<p>ಸಾರ್ವಜನಿಕರು ಆಸ್ಪತ್ರೆಯಲ್ಲಿ ಆರಂಭಿಸಿರುವ ಲಸಿಕಾ ಕೇಂದ್ರ ಹಾಗೂ ನಿಗಾ ಘಟಕದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಬೀದರ್ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ ತೊಡಲಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮನವಿ ಮಾಡಿದರು.</p>.<p>ಬೀದರ್ನಲ್ಲಿ ಎರಡು ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಲಸಿಕಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಗುರುನಾನಕ ಆಸ್ಪತ್ರೆ ಒಂದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಹೇಳಿದರು.</p>.<p>ಗುರುನಾನಕ್ ಝೀರಾ ಫೌಂಡೇಶನ್ ಅಧ್ಯಕ್ಷ ಡಾ. ಬಲಬೀರ್ ಸಿಂಗ್ ಅವರು ಮೊದಲ ಲಸಿಕೆ ಪಡೆದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ನಿಶಾ ಕೌರ್, ಡಾ. ಲಿಂಗರಾಜ ಕಡಾಡಿ, ಡಾ. ಕೊರವಾರ್, ಆರ್ಎಚ್ಒ ಡಾ. ಮಹೇಶ ಬಿರಾದಾರ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಗುರುನಾನಕ ಶಿಕ್ಷಣ ಸಂಸ್ಥೆ ಹಾಗೂ ಗುರುದ್ವಾರ ಸಿಬ್ಬಂದಿಗೆ ಕೋವಿಡ್ ಲಸಿಕೆ ಉಚಿತವಾಗಿ ಕೊಡಲಾಗುವುದು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಘೋಷಿಸಿದರು.</p>.<p>ಇಲ್ಲಿಯ ಗುರುನಾನಕ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಕೋವಿಡ್ ಲಸಿಕಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ನೆರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಲು ಗುರುನಾನಕ ಆಸ್ಪತ್ರೆಯಲ್ಲಿ ಡಯಾಲಸಿಸ್ ಕೇಂದ್ರ, ಕ್ಯಾಟ್ ಲ್ಯಾಬ್ ಸೇರಿದಂತೆ ಅಗತ್ಯ ಅತ್ಯಾಧುನಿಕ ವೈದ್ಯಕೀಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮಾರ್ಚ್ 3 ರಂದು ನ್ಯೂರೊ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.</p>.<p>ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಕೋವಿಡ್ ಸಂಪೂರ್ಣ ತೊಲಗುವವರೆಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರವನ್ನು ಉದ್ಘಾಟಿಸಿದ ಶಾಸಕ ರಹೀಂಖಾನ್ ತಿಳಿಸಿದರು.</p>.<p>ಸಾರ್ವಜನಿಕರು ಆಸ್ಪತ್ರೆಯಲ್ಲಿ ಆರಂಭಿಸಿರುವ ಲಸಿಕಾ ಕೇಂದ್ರ ಹಾಗೂ ನಿಗಾ ಘಟಕದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಬೀದರ್ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ ತೊಡಲಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮನವಿ ಮಾಡಿದರು.</p>.<p>ಬೀದರ್ನಲ್ಲಿ ಎರಡು ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಲಸಿಕಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಗುರುನಾನಕ ಆಸ್ಪತ್ರೆ ಒಂದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಹೇಳಿದರು.</p>.<p>ಗುರುನಾನಕ್ ಝೀರಾ ಫೌಂಡೇಶನ್ ಅಧ್ಯಕ್ಷ ಡಾ. ಬಲಬೀರ್ ಸಿಂಗ್ ಅವರು ಮೊದಲ ಲಸಿಕೆ ಪಡೆದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ನಿಶಾ ಕೌರ್, ಡಾ. ಲಿಂಗರಾಜ ಕಡಾಡಿ, ಡಾ. ಕೊರವಾರ್, ಆರ್ಎಚ್ಒ ಡಾ. ಮಹೇಶ ಬಿರಾದಾರ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>