ಬಸವಕಲ್ಯಾಣದಿಂದ ಕಲಬುರ್ಗಿಗೆ ಹೋಗುವ ಮಾರ್ಗವು ಇಲ್ಲಿಂದ ಹಾದು ಹೋಗುತ್ತದೆ. ಈ ರಸ್ತೆ ಹದಗೆಟ್ಟಿದ್ದರಿಂದ ಡಾಂಬರೀಕರಣ ಕೈಗೊಳ್ಳಲಾಗಿದೆ. ಆದರೂ, ಅರ್ಧ ಭಾಗದಲ್ಲಿ ಮಾತ್ರ ಡಾಂಬರೀಕರಣ ನಡೆಸಿದ್ದರಿಂದ ಎದುರಿನಿಂದ ವಾಹನ ಬಂದರೆ ಹೋಗುವುದಕ್ಕೆ ಜಾಗವೇ ಇಲ್ಲದಂತಾಗಿದೆ. ಅಲ್ಲದೆ ಕೆಲಸ ನಡೆಯದ ಭಾಗದಲ್ಲಿನ ಮಣ್ಣು ಮಳೆಯಿಂದ ಕೊಚ್ಚಿಕೊಂಡು ಹೋಗಿದ್ದರಿಂದ ಅಲ್ಲಲ್ಲಿ ಗುಂಡಿಗಳು ಬಿದ್ದಿವೆ. ಈ ಕಾರಣ ಅಪಘಾತಗಳು ಕೂಡ ಸಂಭವಿಸುತ್ತಿವೆ.