ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಅವರು, ಒತ್ತಡದ ಬದುಕಿನಿಂದ ಜನರಲ್ಲಿ ಡಯಾಲಿಸಿಸ್ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ದುಬಾರಿ ಹಣ ತೆತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಯಕ್ಕೆ ಡಯಾಲಿಸಿಸ್ ಮಾಡಿಸಿಕೊಳ್ಳದಿದ್ದರೆ ಬಹಳ ಸಮಸ್ಯೆ ಎದುರಿಸಬೇಕಾಗುತ್ತದೆ. ಇದನ್ನೆಲ್ಲ ಮನಗಂಡು ಸಮಸ್ಯೆ ಬಗೆಹರಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದರು.