‘ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಅದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ಮಾಡಿರುವ 14 ದಿನಗಳ ಕರ್ಫ್ಯೂ ಬಂಡವಾಳ ಮಾಡಿಕೊಂಡು ತರಕಾರಿ, ಹಣ್ಣು, ಕಿರಾಣ ದಿನಸಿ ಪದಾರ್ಥಗಳ ಬೆಲೆ ಹೆಚ್ಚಿಸಿ, ಕೆಲವರು ಗ್ರಾಹಕರಿಗೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ’ ಎಂದು ನಿವಾಸಿ ಶಶಿಕುಮಾರ ಮಾಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.