<p><strong>ಬೀದರ್</strong>: ಶಿಕ್ಷಕರು ಬೋಧನಾ ಕೌಶಲ ಹೆಚ್ಚಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಸಲಹೆ ಮಾಡಿದರು.</p>.<p>ಇಲ್ಲಿಯ ನೌಬಾದ್ನ ಡಯಟ್ನಲ್ಲಿ ನಡೆದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸೃಜನಾತ್ಮಕ ಬೋಧನೆ ಹಾಗೂ ಹೊಸ ಶಿಕ್ಷಣ ನೀತಿ ಕುರಿತ 12 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರಸ್ತುತ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ಮಕ್ಕಳಿಗೆ ಅದಕ್ಕೆ ಪೂರಕವಾದ ಶಿಕ್ಷಣ ನೀಡುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.</p>.<p>ಶಿಕ್ಷಕರು ತಾವು ಬೋಧಿಸುವ ವಿಷಯದ ಆಸಕ್ತಿ ಬೆಳೆಸಿಕೊಳ್ಳಬೇಕು. ಮಕ್ಕಳ ವ್ಯಕ್ತಿತ್ವ ನಿರ್ಮಾಣಕ್ಕೆ ನಿರಂತರ ಶ್ರಮಿಸಬೇಕು. ಆ ಮೂಲಕ ವೃತ್ತಿಯ ಘನತೆ, ಗೌರವ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಟಿಸಿಎಚ್, ಬಿ.ಎಡ್ ಪದವಿಯಿಂದ ಶಿಕ್ಷಕ ಹುದ್ದೆಗೆ ಅರ್ಹತೆ ಮಾತ್ರ ಪಡೆಯಬಹುದು. ಆದರೆ, ಮಕ್ಕಳಿಗೆ ವಿಷಯ ಮನವರಿಕೆ ಆಗುವಂತೆ ಬೋಧನೆ ಮಾಡುವವರೇ ನಿಜವಾದ ಶಿಕ್ಷಕರು ಎಂದು ಹೇಳಿದರು.</p>.<p>ತರಬೇತಿ ಅವಧಿಯಲ್ಲಿ ಪಡೆದ ಜ್ಞಾನವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಹೊಸ ಉತ್ಸಾಹ, ಹುಮ್ಮಸ್ಸಿನೊಂದಿಗೆ ಬೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಮಕ್ಕಳ ಸರ್ವಾಂಗೀಣ ಬೆಳವಣಿಗೆಯೇ ಹೊಸ ಶಿಕ್ಷಣ ನೀತಿಯ ಗುರಿಯಾಗಿದೆ. ಹೊಸ ನೀತಿಯಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣಕ್ಕೆ ಆದ್ಯತೆ ಕೊಡಲಾಗಿದೆ. ಮಕ್ಕಳ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದರು.</p>.<p>ಅನೇಕ ಶಿಬಿರಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಡಯಟ್ ಪ್ರಾಚಾರ್ಯ ಬಿ.ಕೆ. ದಿಗಂಬರ ಅಧ್ಯಕ್ಷತೆ ವಹಿಸಿದ್ದರು. ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ನವೀನ್ ಭಟ್, ಡಯಟ್ ನೋಡಲ್ ಅಧಿಕಾರಿ ಸಂತೋಷ ಪೂಜಾರಿ ಮಾತನಾಡಿದರು.</p>.<p>ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಚೇತನಾ, ಜಾಫರ್ ಉಪಸ್ಥಿತರಿದ್ದರು.<br />ಕೆಕೆಎಚ್ಆರ್ಎಸಿಎಸ್ ತಾಲ್ಲೂಕು ಸಂಯೋಜಕ ಗುರುನಾಥ ರಾಜಗೀರಾ ನಿರೂಪಿಸಿದರು. ಗೋವಿಂದ ರೆಡ್ಡಿ ವಂದಿಸಿದರು.</p>.<p>ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಬೆಂಗಳೂರಿನ ಆ್ಯಕ್ಟ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 185 ಶಿಕ್ಷಕ ಹಾಗೂ ಶಿಕ್ಷಕಿಯರು ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಶಿಕ್ಷಕರು ಬೋಧನಾ ಕೌಶಲ ಹೆಚ್ಚಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಸಲಹೆ ಮಾಡಿದರು.</p>.<p>ಇಲ್ಲಿಯ ನೌಬಾದ್ನ ಡಯಟ್ನಲ್ಲಿ ನಡೆದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಶಿಕ್ಷಕರ ಸೃಜನಾತ್ಮಕ ಬೋಧನೆ ಹಾಗೂ ಹೊಸ ಶಿಕ್ಷಣ ನೀತಿ ಕುರಿತ 12 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರಸ್ತುತ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ಮಕ್ಕಳಿಗೆ ಅದಕ್ಕೆ ಪೂರಕವಾದ ಶಿಕ್ಷಣ ನೀಡುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.</p>.<p>ಶಿಕ್ಷಕರು ತಾವು ಬೋಧಿಸುವ ವಿಷಯದ ಆಸಕ್ತಿ ಬೆಳೆಸಿಕೊಳ್ಳಬೇಕು. ಮಕ್ಕಳ ವ್ಯಕ್ತಿತ್ವ ನಿರ್ಮಾಣಕ್ಕೆ ನಿರಂತರ ಶ್ರಮಿಸಬೇಕು. ಆ ಮೂಲಕ ವೃತ್ತಿಯ ಘನತೆ, ಗೌರವ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>ಟಿಸಿಎಚ್, ಬಿ.ಎಡ್ ಪದವಿಯಿಂದ ಶಿಕ್ಷಕ ಹುದ್ದೆಗೆ ಅರ್ಹತೆ ಮಾತ್ರ ಪಡೆಯಬಹುದು. ಆದರೆ, ಮಕ್ಕಳಿಗೆ ವಿಷಯ ಮನವರಿಕೆ ಆಗುವಂತೆ ಬೋಧನೆ ಮಾಡುವವರೇ ನಿಜವಾದ ಶಿಕ್ಷಕರು ಎಂದು ಹೇಳಿದರು.</p>.<p>ತರಬೇತಿ ಅವಧಿಯಲ್ಲಿ ಪಡೆದ ಜ್ಞಾನವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಹೊಸ ಉತ್ಸಾಹ, ಹುಮ್ಮಸ್ಸಿನೊಂದಿಗೆ ಬೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಮಕ್ಕಳ ಸರ್ವಾಂಗೀಣ ಬೆಳವಣಿಗೆಯೇ ಹೊಸ ಶಿಕ್ಷಣ ನೀತಿಯ ಗುರಿಯಾಗಿದೆ. ಹೊಸ ನೀತಿಯಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣಕ್ಕೆ ಆದ್ಯತೆ ಕೊಡಲಾಗಿದೆ. ಮಕ್ಕಳ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದರು.</p>.<p>ಅನೇಕ ಶಿಬಿರಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಡಯಟ್ ಪ್ರಾಚಾರ್ಯ ಬಿ.ಕೆ. ದಿಗಂಬರ ಅಧ್ಯಕ್ಷತೆ ವಹಿಸಿದ್ದರು. ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ನವೀನ್ ಭಟ್, ಡಯಟ್ ನೋಡಲ್ ಅಧಿಕಾರಿ ಸಂತೋಷ ಪೂಜಾರಿ ಮಾತನಾಡಿದರು.</p>.<p>ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಚೇತನಾ, ಜಾಫರ್ ಉಪಸ್ಥಿತರಿದ್ದರು.<br />ಕೆಕೆಎಚ್ಆರ್ಎಸಿಎಸ್ ತಾಲ್ಲೂಕು ಸಂಯೋಜಕ ಗುರುನಾಥ ರಾಜಗೀರಾ ನಿರೂಪಿಸಿದರು. ಗೋವಿಂದ ರೆಡ್ಡಿ ವಂದಿಸಿದರು.</p>.<p>ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಬೆಂಗಳೂರಿನ ಆ್ಯಕ್ಟ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 185 ಶಿಕ್ಷಕ ಹಾಗೂ ಶಿಕ್ಷಕಿಯರು ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>