<p><strong>ಚಿಟಗುಪ್ಪ</strong>: ಲೋಕಸಭಾ ಚುನಾವಣೆ ಪ್ರಚಾರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಟ್ಟಣಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ.</p>.<p>ಪಕ್ಷದ ಕಾರ್ಯಕರ್ತರಲ್ಲದೆ, ಅಭ್ಯರ್ಥಿಗಳ ಮಾಹಿತಿಯನ್ನೊಳಗೊಂಡ ಕ್ಯಾಲೆಂಡರ್, ಭಿತ್ತಿಪತ್ರಗಳನ್ನು ಮತದಾರರ ಮನೆಗಳಿಗೆ ತಲುಪಿಸುವುದಕ್ಕೆ ಅಭ್ಯರ್ಥಿಗಳು ದಿನಗೂಲಿ ಆಧಾರದಲ್ಲಿ ಕೃಷಿ ಕಾರ್ಮಿಕ ಮಹಿಳೆಯರು ಹಾಗೂ ಪುರುಷರನ್ನು ಬಳಸಿಕೊಳ್ಳುತ್ತಿದ್ದಾರೆ. ರೈತರು ಕಾರ್ಮಿಕರಿಲ್ಲದ ಕಾರಣ ಹೊಲ–ಗದ್ದೆಗಳ ಕೆಲಸ ಕಾರ್ಯಗಳನ್ನು ಚುನಾವಣೆ ಮುಗಿಯುವವರೆಗೂ ಸ್ಥಗಿತಗೊಳಿಸುವಂತಾಗಿದೆ.</p>.<p>ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರಕ್ಕೆ ಬಳಸಿಕೊಳ್ಳುವ ಕಾರ್ಮಿಕರಿಗೆ ದಿನಕ್ಕೆ ₹600 ರಿಂದ ₹800 ರವರೆಗೂ ಕೂಲಿ ಪಾವತಿಸುತ್ತಿರುವುದರಿಂದ ಹೊಲ–ಗದ್ದೆ ಕೆಲಸಕ್ಕೆ ಯಾರೂ ಬರುತ್ತಿಲ್ಲ ಎಂದು ನಿರ್ಣಾದ ರೈತ ಮಲ್ಲಪ್ಪ ತಿಳಿಸಿದರು.</p>.<p>ಕಾರ್ಮಿಕರು, ನಿತ್ಯ ಬೆಳಿಗ್ಗೆಯಿಂದ ಸಂಜೆಯವರೆಗೂ ಊರೂರು ಸುತ್ತಾಡಿ ಮತದಾರರ ಮನೆಗಳಿಗೆ ಭೇಟಿ ನೀಡಿ ತಾವು ಕೂಲಿ ಪಡೆದು ಕೆಲಸ ಮಾಡುತ್ತಿರುವ ಅಭ್ಯರ್ಥಿ ಪರ ಮತಯಾಚಿಸಿ ಸಂಜೆ ಡಾಬಾಗಳಲ್ಲಿ ಊಟ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾರೆ ಎಂದು ಬೆಳಕೇರಾದ ರೈತ ಶಾಂತಪ್ಪ ಹೇಳಿದರು.</p>.<p>ಅಂಗಡಿಗಳು, ಹೋಟೆಲ್, ರಸ್ತೆ, ಬಸ್ ನಿಲ್ದಾಣ ಹೀಗೆ ಎಲ್ಲೆಂದರಲ್ಲಿ ನಾಲ್ಕೈದು ಜನ ಸಾರ್ವಜನಿಕರು ಸೇರಿಕೊಂಡು ಚುನಾವಣೆ ಚರ್ಚೆಯಲ್ಲಿ ತೊಡಗಿದ್ದಾರೆ. ಚುನಾವಣೆಯದ್ದೇ ಮಾತಾಡುತ್ತಿದ್ದಾರೆ.</p>.<p>ಕೈಗೆ ಬಂದ ತರಕಾರಿ ಬಿಡಿಸಿಕೊಂಡು ಮಾರುಕಟ್ಟೆಗೆ ತರುವುದಕ್ಕೂ ಕಾರ್ಮಿಕರಿಲ್ಲದ್ದಕ್ಕೆ ಬಹುತೇಕ ರೈತರು ಬೆಳೆದ ತರಕಾರಿ ಹೊಲದಲ್ಲಿಯೇ ಕೊಳೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>: ಲೋಕಸಭಾ ಚುನಾವಣೆ ಪ್ರಚಾರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಟ್ಟಣಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ.</p>.<p>ಪಕ್ಷದ ಕಾರ್ಯಕರ್ತರಲ್ಲದೆ, ಅಭ್ಯರ್ಥಿಗಳ ಮಾಹಿತಿಯನ್ನೊಳಗೊಂಡ ಕ್ಯಾಲೆಂಡರ್, ಭಿತ್ತಿಪತ್ರಗಳನ್ನು ಮತದಾರರ ಮನೆಗಳಿಗೆ ತಲುಪಿಸುವುದಕ್ಕೆ ಅಭ್ಯರ್ಥಿಗಳು ದಿನಗೂಲಿ ಆಧಾರದಲ್ಲಿ ಕೃಷಿ ಕಾರ್ಮಿಕ ಮಹಿಳೆಯರು ಹಾಗೂ ಪುರುಷರನ್ನು ಬಳಸಿಕೊಳ್ಳುತ್ತಿದ್ದಾರೆ. ರೈತರು ಕಾರ್ಮಿಕರಿಲ್ಲದ ಕಾರಣ ಹೊಲ–ಗದ್ದೆಗಳ ಕೆಲಸ ಕಾರ್ಯಗಳನ್ನು ಚುನಾವಣೆ ಮುಗಿಯುವವರೆಗೂ ಸ್ಥಗಿತಗೊಳಿಸುವಂತಾಗಿದೆ.</p>.<p>ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರಕ್ಕೆ ಬಳಸಿಕೊಳ್ಳುವ ಕಾರ್ಮಿಕರಿಗೆ ದಿನಕ್ಕೆ ₹600 ರಿಂದ ₹800 ರವರೆಗೂ ಕೂಲಿ ಪಾವತಿಸುತ್ತಿರುವುದರಿಂದ ಹೊಲ–ಗದ್ದೆ ಕೆಲಸಕ್ಕೆ ಯಾರೂ ಬರುತ್ತಿಲ್ಲ ಎಂದು ನಿರ್ಣಾದ ರೈತ ಮಲ್ಲಪ್ಪ ತಿಳಿಸಿದರು.</p>.<p>ಕಾರ್ಮಿಕರು, ನಿತ್ಯ ಬೆಳಿಗ್ಗೆಯಿಂದ ಸಂಜೆಯವರೆಗೂ ಊರೂರು ಸುತ್ತಾಡಿ ಮತದಾರರ ಮನೆಗಳಿಗೆ ಭೇಟಿ ನೀಡಿ ತಾವು ಕೂಲಿ ಪಡೆದು ಕೆಲಸ ಮಾಡುತ್ತಿರುವ ಅಭ್ಯರ್ಥಿ ಪರ ಮತಯಾಚಿಸಿ ಸಂಜೆ ಡಾಬಾಗಳಲ್ಲಿ ಊಟ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾರೆ ಎಂದು ಬೆಳಕೇರಾದ ರೈತ ಶಾಂತಪ್ಪ ಹೇಳಿದರು.</p>.<p>ಅಂಗಡಿಗಳು, ಹೋಟೆಲ್, ರಸ್ತೆ, ಬಸ್ ನಿಲ್ದಾಣ ಹೀಗೆ ಎಲ್ಲೆಂದರಲ್ಲಿ ನಾಲ್ಕೈದು ಜನ ಸಾರ್ವಜನಿಕರು ಸೇರಿಕೊಂಡು ಚುನಾವಣೆ ಚರ್ಚೆಯಲ್ಲಿ ತೊಡಗಿದ್ದಾರೆ. ಚುನಾವಣೆಯದ್ದೇ ಮಾತಾಡುತ್ತಿದ್ದಾರೆ.</p>.<p>ಕೈಗೆ ಬಂದ ತರಕಾರಿ ಬಿಡಿಸಿಕೊಂಡು ಮಾರುಕಟ್ಟೆಗೆ ತರುವುದಕ್ಕೂ ಕಾರ್ಮಿಕರಿಲ್ಲದ್ದಕ್ಕೆ ಬಹುತೇಕ ರೈತರು ಬೆಳೆದ ತರಕಾರಿ ಹೊಲದಲ್ಲಿಯೇ ಕೊಳೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>