ಪಕ್ಷದ ಕಾರ್ಯಕರ್ತರಲ್ಲದೆ, ಅಭ್ಯರ್ಥಿಗಳ ಮಾಹಿತಿಯನ್ನೊಳಗೊಂಡ ಕ್ಯಾಲೆಂಡರ್, ಭಿತ್ತಿಪತ್ರಗಳನ್ನು ಮತದಾರರ ಮನೆಗಳಿಗೆ ತಲುಪಿಸುವುದಕ್ಕೆ ಅಭ್ಯರ್ಥಿಗಳು ದಿನಗೂಲಿ ಆಧಾರದಲ್ಲಿ ಕೃಷಿ ಕಾರ್ಮಿಕ ಮಹಿಳೆಯರು ಹಾಗೂ ಪುರುಷರನ್ನು ಬಳಸಿಕೊಳ್ಳುತ್ತಿದ್ದಾರೆ. ರೈತರು ಕಾರ್ಮಿಕರಿಲ್ಲದ ಕಾರಣ ಹೊಲ–ಗದ್ದೆಗಳ ಕೆಲಸ ಕಾರ್ಯಗಳನ್ನು ಚುನಾವಣೆ ಮುಗಿಯುವವರೆಗೂ ಸ್ಥಗಿತಗೊಳಿಸುವಂತಾಗಿದೆ.