<p><strong>ಬಸವಕಲ್ಯಾಣ:</strong> ಶಾಸಕ ಶರಣು ಸಲಗರ ಅವರು ಬುಧವಾರ ನಗರದ ನಾರಾಯಣಪುರ ರಸ್ತೆಯಲ್ಲಿನ ಇಂದಿರಾ ಕ್ಯಾಂಟೀನ್ನಲ್ಲಿ ಊಟ ಸವಿದರು.</p>.<p>ಸರ್ಕಾರ ಲಾಕ್ಡೌನ್ ಇರುವ ಕಾರಣ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಊಟ ನೀಡಲಾಗುವುದು ಎಂದು ಪ್ರಕಟಿಸಿದ ಕಾರಣ ಶಾಸಕರು ಊಟ ಬಡಿಸಿ ಉಚಿತ ವ್ಯವಸ್ಥೆಗೆ ಚಾಲನೆ ನೀಡಿ ತಾವೂ ಊಟ ಮಾಡಿದರು.</p>.<p>ಬೆಳಿಗ್ಗೆಯ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ನೀಡಲಾಗುತ್ತದೆ. ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರು ಇದರ ಲಾಭ ಪಡೆದು ಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ನಾಹೀದಾ ಸುಲ್ತಾನಾ, ಪೌರಾಯುಕ್ತ ಗೌತಮಬುದ್ಧ ಕಾಂಬಳೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೃಷ್ಣಾ ಗೋಣೆ ಉಪಸ್ಥಿತರಿದ್ದರು.</p>.<p class="Briefhead"><strong>1700 ಜನರಿಗೆ ಊಟ</strong></p>.<p>ಬೀದರ್: ನಗರದಲ್ಲಿ ಮೂರು ಇಂದಿರಾ ಕ್ಯಾಂಟೀನ್ಗಳಿವೆ.</p>.<p>‘ನಗರಸಭೆ ಕಚೇರಿ, ಜಿಲ್ಲಾ ಆಸ್ಪತ್ರೆ ಮತ್ತು ಗಾಂಧಿ ಗಂಜ್ ಬಳಿಯಿರುವ ಇಂದಿರಾ ಕ್ಯಾಂಟೀನ್ಗಳಿಂದ ಮಂಗಳವಾರ ಒಟ್ಟು 800 ಮತ್ತು ಬುಧವಾರ ಒಟ್ಟು 900 ಮಂದಿಗೆ ಉಚಿತ ಉಪಾಹಾರ ಮತ್ತು ಊಟ ನೀಡಲಾಯಿತು’ ಎಂದು ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕ ಜಟಿಂಗ್ ಮಾಹಿತಿ ನೀಡಿದ್ದಾರೆ.</p>.<p class="Briefhead"><strong>1300 ಜನರಿಗೆ ಆಹಾರ</strong></p>.<p>ಭಾಲ್ಕಿ: ‘ಇಲ್ಲಿಯ ಇಂದಿರಾ ಕ್ಯಾಂಟೀನ್ನಲ್ಲಿ ಮಂಗಳವಾರ ಉಪಾಹಾರ, ಊಟ ಸೇರಿ ಸುಮಾರು 700 ಜನರಿಗೆ ಹಾಗೂ ಬುಧವಾರ 600 ಜನರಿಗೆ ಉಚಿತವಾಗಿ ನೀಡಲಾಗಿದೆ’ ಎಂದು ಕ್ಯಾಂಟೀನ್ ಮೇಲ್ವಿಚಾರಕ ಬಿಂದುಸಾರ ಶಿವಪೂರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ಶಾಸಕ ಶರಣು ಸಲಗರ ಅವರು ಬುಧವಾರ ನಗರದ ನಾರಾಯಣಪುರ ರಸ್ತೆಯಲ್ಲಿನ ಇಂದಿರಾ ಕ್ಯಾಂಟೀನ್ನಲ್ಲಿ ಊಟ ಸವಿದರು.</p>.<p>ಸರ್ಕಾರ ಲಾಕ್ಡೌನ್ ಇರುವ ಕಾರಣ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಊಟ ನೀಡಲಾಗುವುದು ಎಂದು ಪ್ರಕಟಿಸಿದ ಕಾರಣ ಶಾಸಕರು ಊಟ ಬಡಿಸಿ ಉಚಿತ ವ್ಯವಸ್ಥೆಗೆ ಚಾಲನೆ ನೀಡಿ ತಾವೂ ಊಟ ಮಾಡಿದರು.</p>.<p>ಬೆಳಿಗ್ಗೆಯ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ನೀಡಲಾಗುತ್ತದೆ. ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರು ಇದರ ಲಾಭ ಪಡೆದು ಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ನಾಹೀದಾ ಸುಲ್ತಾನಾ, ಪೌರಾಯುಕ್ತ ಗೌತಮಬುದ್ಧ ಕಾಂಬಳೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೃಷ್ಣಾ ಗೋಣೆ ಉಪಸ್ಥಿತರಿದ್ದರು.</p>.<p class="Briefhead"><strong>1700 ಜನರಿಗೆ ಊಟ</strong></p>.<p>ಬೀದರ್: ನಗರದಲ್ಲಿ ಮೂರು ಇಂದಿರಾ ಕ್ಯಾಂಟೀನ್ಗಳಿವೆ.</p>.<p>‘ನಗರಸಭೆ ಕಚೇರಿ, ಜಿಲ್ಲಾ ಆಸ್ಪತ್ರೆ ಮತ್ತು ಗಾಂಧಿ ಗಂಜ್ ಬಳಿಯಿರುವ ಇಂದಿರಾ ಕ್ಯಾಂಟೀನ್ಗಳಿಂದ ಮಂಗಳವಾರ ಒಟ್ಟು 800 ಮತ್ತು ಬುಧವಾರ ಒಟ್ಟು 900 ಮಂದಿಗೆ ಉಚಿತ ಉಪಾಹಾರ ಮತ್ತು ಊಟ ನೀಡಲಾಯಿತು’ ಎಂದು ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕ ಜಟಿಂಗ್ ಮಾಹಿತಿ ನೀಡಿದ್ದಾರೆ.</p>.<p class="Briefhead"><strong>1300 ಜನರಿಗೆ ಆಹಾರ</strong></p>.<p>ಭಾಲ್ಕಿ: ‘ಇಲ್ಲಿಯ ಇಂದಿರಾ ಕ್ಯಾಂಟೀನ್ನಲ್ಲಿ ಮಂಗಳವಾರ ಉಪಾಹಾರ, ಊಟ ಸೇರಿ ಸುಮಾರು 700 ಜನರಿಗೆ ಹಾಗೂ ಬುಧವಾರ 600 ಜನರಿಗೆ ಉಚಿತವಾಗಿ ನೀಡಲಾಗಿದೆ’ ಎಂದು ಕ್ಯಾಂಟೀನ್ ಮೇಲ್ವಿಚಾರಕ ಬಿಂದುಸಾರ ಶಿವಪೂರೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>