‘ರಸ್ತೆ ಬದಿಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಪಂಚಾಯಿತಿಯವರು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಎಲ್ಲ ಕಸ, ಕಡ್ಡಿ
ಚರಂಡಿ ಸೇರುತ್ತಿದೆ. ಸಾರ್ವಜನಿಕರು ಇಂಥ ದುರ್ನಾತದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ಸ್ವಚ್ಛತೆ ಕಡೆಗೆ ಗಮನಹರಿಸಬೇಕಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ ಹೇಳುತ್ತಾರೆ.