‘ತೆರೆದ ಚರಂಡಿಗಳು ದುರ್ವಾಸನೆ ಬೀರುತ್ತಿದ್ದು, ನಿವಾಸಿಗಳು ತೊಂದರೆ ಪಡುವಂತಾಗಿದೆ. ತಿಂಗಳು ಕಳೆದರೂ ಸ್ವಚ್ಛಗೊಳ್ಳದ ಚರಂಡಿಗಳಿಂದ ರೋಗದ ಭೀತಿ ಎದುರಾಗಿದೆ. ಆದರೆ, ನಿವಾಸಿಗಳ ಸಂಕಷ್ಟಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ’ ಎಂದು ರುಕ್ಸಾನಾ ಸಾಬೋದ್ದಿನ್ ಅಸಮಾಧಾನ ವ್ಯಕ್ತಪಡಿಸುತ್ತಾರೆ.