ಭಾಲ್ಕಿ: ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ನಲ್ಲಿ ಆಮ್ಲಜನಕ ಕೊರತೆ ತೀವ್ರವಾಗುತ್ತಿದ್ದು, ನಿತ್ಯ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಜಿಲ್ಲೆಯಲ್ಲಿ ಆಮ್ಲಜನಕ ಮರುಪೂರಣ ಮಾಡುವ ಸ್ಥಾವರ ಅಥವಾ ಘಟಕವಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಹಾಗಾಗಿ, ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ವೈದ್ಯಕೀಯ ಆಮ್ಲಜನಕ ಪೂರೈಸಲು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಕಾರ್ಯಾ ಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.