ಹೆದ್ದಾರಿ ಟೆಂಡರ್ ಪ್ರಕ್ರಿಯೆ ಜುಲೈ 1ಕ್ಕೆ ಮುಗಿದು ಅರ್ಹ ಕಂಪನಿಗೆ ಕಾಮಗಾರಿ ಸಿಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಟೆಂಡರ್ನಿಂದ ಹೊರಗಿಡಲಾಗಿದ್ದ ಹೈದರಾಬಾದ್ನ ಟ್ರ್ಯಾಕ್ ಆ್ಯಂಡ್ ಟವರ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ದೆಹಲಿ ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿತ್ತು ಎಂದು ತಿಳಿಸಿದ್ದಾರೆ. ಹೈಕೋರ್ಟ್ ಕಂಪನಿಯ ಅರ್ಜಿ ತಿರಸ್ಕರಿಸಿದ್ದು, ಸರ್ಕಾರದ ಪರವಾಗಿ ತೀರ್ಪು ನೀಡಿದೆ.
ಹೆದ್ದಾರಿ ವಿಚಾರದಲ್ಲಿ ಸರ್ಕಾರಕ್ಕೆ ಗೆಲುವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.