ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತಿಯಲ್ಲಿ ಕೀಟ ನಿರ್ವಹಣೆ: ಚರ್ಚೆ ಕಾರ್ಯಕ್ರಮ ಇಂದು

Last Updated 1 ಅಕ್ಟೋಬರ್ 2021, 15:30 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೃಷಿ ಪಾಠಶಾಲೆ ಸರಣಿಯಲ್ಲಿ ಅ. 2 ರಂದು ಬೆಳಿಗ್ಗೆ 11ಕ್ಕೆ ಆನ್‍ಲೈನ್‍ನಲ್ಲಿ ಹತ್ತಿ ಬೆಳೆಗೆ ಬಾಧಿಸುವ ಕೀಟಗಳು ಹಾಗೂ ನಿರ್ವಹಣೆ ಕುರಿತು ವಿಷಯ ಮಂಡನೆ ಹಾಗೂ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೀಟ ವಿಜ್ಞಾನಿ ಡಾ. ಶಿವಾನಂದ ಜಿ. ಹಂಚಿನಾಳ ಅವರು ಹತ್ತಿ ಬೆಳೆಯಲ್ಲಿ ಕಂಡು ಬರುವ ಕೀಟಗಳು ಹಾಗೂ ಅವುಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಲಿದ್ದಾರೆ.

ಗೂಗಲ್ ಮೀಟ್ ಲಿಂಕ್ meet.google.com/nby-tvup-hic ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಜಿಲ್ಲೆಯ ರೈತರು ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT