‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಒಂದು ಕಣ್ಣಿಗೆ ಬೆಣ್ಣೆ ಹಾಗೂ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜನವರಿಯಲ್ಲಿ ಐವರು ಸಹಾಯಕಿಯರಿಗೆ ಕಾರ್ಯಕರ್ತೆ ಹುದ್ದೆಗೆ ಬಡ್ತಿ ನೀಡಿದ್ದಾರೆ. ಇನ್ನೂ ಅನೇಕರು ಅರ್ಹರಿದ್ದರೂ ಅವರಿಗೆ ಬಡ್ತಿ ಕೊಡದೆ, ಆ ಸ್ಥಳಗಳಿಗೆ ಹೊಸದಾಗಿ ಅರ್ಜಿ ಕರೆದಿದ್ದಾರೆ. ಇದಕ್ಕೆ ಏನು ಕಾರಣ’ ಎಂದು ಪ್ರಶ್ನಿಸಿದ್ದಾರೆ.