<p><strong>ಭಾಲ್ಕಿ:</strong> ‘ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಕುರಿತಂತೆ ಜಿಲ್ಲಾಡಳಿತಕ್ಕೆ ಮುನ್ನೆಚ್ಚರಿಕೆ ನೀಡಿದ್ದರೂ ಕ್ರಮವಹಿಸದ ಕಾರಣ 500ಕ್ಕೂ ಹೆಚ್ಚು ಸೋಂಕಿತರು ಆಕ್ಸಿಜನ್, ಹಾಸಿಗೆ ಲಭ್ಯವಿಲ್ಲದೆ ಪರದಾಡುವಂತಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರ ದಾಟಿದೆ. ಆದರೆ, ಜಿಲ್ಲೆಯಲ್ಲಿ ಇರುವುದು ಕೇವಲ 500 ಆಕ್ಸಿಜನ್ ಸಹಿತ ಹಾಸಿಗೆಗಳು ಮಾತ್ರ. ಸದ್ಯ ಆಕ್ಸಿಜನ್ ಹಾಸಿಗೆಯ ಅಗತ್ಯ ಇರುವ ರೋಗಿಗಳ ಸಂಖ್ಯೆ ಸಾವಿರ ದಾಟಿದೆ. ಮುಂದಿನ ವಾರ ಈ ಸಂಖ್ಯೆ 1500 ದಾಟಲಿದೆ. ಮೇ 15ರ ಹೊತ್ತಿಗೆ 2000ಕ್ಕೂ ಹೆಚ್ಚು ಆಕ್ಸಿಜನ್ ಹಾಸಿಗೆಯ ಅಗತ್ಯ ಬೀಳುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಪ್ರವೃತ್ತವಾಗಿ ಜಿಲ್ಲಾಡಳಿತ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಆಕ್ಸಿಜನ್ ಹಾಸಿಗೆ ಅಗತ್ಯ ಇರುವ ಸೋಂಕಿತರಿಗೆ ಅದನ್ನು ಪೂರೈಸ ಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಈ ತಿಂಗಳ ಅಂತ್ಯದವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸುತ್ತಿರುವ ಆಕ್ಸಿಜನ್ಗಿಂತಲೂ ಮೂರು ಪಟ್ಟು ಆಮ್ಲಜನಕ ಸಿಲಿಂಡರ್ಗಳ ಅಗತ್ಯ ಬೀಳಲಿದ್ದು, ತಕ್ಷಣವೇ ಜಿಲ್ಲೆಗೆ ಹೆಚ್ಚುವರಿ ಆಕ್ಸಿಜನ್ ಪೂರೈಕೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿ ಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಮನೆಯಲ್ಲೇ ಪ್ರತ್ಯೇಕವಾಗಿದ್ದು ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಆರೋಗ್ಯ ಇಲಾಖೆಗೆ ಹಿಡಿತವೇ ತಪ್ಪಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರ ಮತ್ತು ಹೋಬಳಿ ಕೇಂದ್ರಗಳಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದು, ವೆಂಟಿಲೇಟರ್, ಆಕ್ಸಿಜನ್ ಹಾಸಿಗೆ ಲಭ್ಯವಾಗುವಂತೆ ಮಾಡಿ ಬಡ ರೋಗಿಗಳ ಪ್ರಾಣ ಉಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಕುರಿತಂತೆ ಜಿಲ್ಲಾಡಳಿತಕ್ಕೆ ಮುನ್ನೆಚ್ಚರಿಕೆ ನೀಡಿದ್ದರೂ ಕ್ರಮವಹಿಸದ ಕಾರಣ 500ಕ್ಕೂ ಹೆಚ್ಚು ಸೋಂಕಿತರು ಆಕ್ಸಿಜನ್, ಹಾಸಿಗೆ ಲಭ್ಯವಿಲ್ಲದೆ ಪರದಾಡುವಂತಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರ ದಾಟಿದೆ. ಆದರೆ, ಜಿಲ್ಲೆಯಲ್ಲಿ ಇರುವುದು ಕೇವಲ 500 ಆಕ್ಸಿಜನ್ ಸಹಿತ ಹಾಸಿಗೆಗಳು ಮಾತ್ರ. ಸದ್ಯ ಆಕ್ಸಿಜನ್ ಹಾಸಿಗೆಯ ಅಗತ್ಯ ಇರುವ ರೋಗಿಗಳ ಸಂಖ್ಯೆ ಸಾವಿರ ದಾಟಿದೆ. ಮುಂದಿನ ವಾರ ಈ ಸಂಖ್ಯೆ 1500 ದಾಟಲಿದೆ. ಮೇ 15ರ ಹೊತ್ತಿಗೆ 2000ಕ್ಕೂ ಹೆಚ್ಚು ಆಕ್ಸಿಜನ್ ಹಾಸಿಗೆಯ ಅಗತ್ಯ ಬೀಳುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯಪ್ರವೃತ್ತವಾಗಿ ಜಿಲ್ಲಾಡಳಿತ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಆಕ್ಸಿಜನ್ ಹಾಸಿಗೆ ಅಗತ್ಯ ಇರುವ ಸೋಂಕಿತರಿಗೆ ಅದನ್ನು ಪೂರೈಸ ಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಈ ತಿಂಗಳ ಅಂತ್ಯದವರೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸುತ್ತಿರುವ ಆಕ್ಸಿಜನ್ಗಿಂತಲೂ ಮೂರು ಪಟ್ಟು ಆಮ್ಲಜನಕ ಸಿಲಿಂಡರ್ಗಳ ಅಗತ್ಯ ಬೀಳಲಿದ್ದು, ತಕ್ಷಣವೇ ಜಿಲ್ಲೆಗೆ ಹೆಚ್ಚುವರಿ ಆಕ್ಸಿಜನ್ ಪೂರೈಕೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿ ಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಮನೆಯಲ್ಲೇ ಪ್ರತ್ಯೇಕವಾಗಿದ್ದು ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಆರೋಗ್ಯ ಇಲಾಖೆಗೆ ಹಿಡಿತವೇ ತಪ್ಪಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರ ಮತ್ತು ಹೋಬಳಿ ಕೇಂದ್ರಗಳಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದು, ವೆಂಟಿಲೇಟರ್, ಆಕ್ಸಿಜನ್ ಹಾಸಿಗೆ ಲಭ್ಯವಾಗುವಂತೆ ಮಾಡಿ ಬಡ ರೋಗಿಗಳ ಪ್ರಾಣ ಉಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>