ಅ.12 ರಂದು ಸಾಹಿತಿ ರಂಜಾನ ದರ್ಗಾ ಉದ್ಘಾಟಿಸುವರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಂ.ಇಂದಿರೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ತೋಟಗಾರಿಕೆ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಡಾ.ಎನ್.ರಾಜೇಶ್ವರಿ, ಶಂಕರೆಪ್ಪ ಮಳಲಿ, ಎಸ್.ಎನ್.ಮಂಜುನಾಥ ಗೌಡ, ಆರ್.ಎಂ.ನಾಗೇಶ, ಡಾ.ಯೋಗಿರಾಜ ಪಾಟೀಲ ಭಾಗವಹಿಸುವರು.