<p><strong>ಚಿಟಗುಪ್ಪ:</strong> ಲಾಕ್ಡೌನ್ ಮೂರನೇ ದಿನ ಬುಧವಾರ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಹೊರ ವಲಯದಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ನಲ್ಲಿ ವಾಹನಗಳು ತಡೆಯುವ ಕಾರ್ಯಕ್ಕೆ ತಹಶೀಲ್ದಾರ್ ಜಿಯಾವುಲ್ಲ ಚಾಲನೆ ನೀಡಿದರು.</p>.<p>‘ನಿತ್ಯ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಯಲು ಸರ್ಕಾರ ಕೈಗೊಂಡಿರುವ ಜಾರಿಗೊಳಿಸಿರುವ ಲಾಕ್ಡೌನ್ ಕಾರ್ಯ ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕಾಗಿರುವುದು ಎಲ್ಲ ನಾಗರಿಕರ, ಸರ್ಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ಅವರು ಹೇಳಿದರು.</p>.<p>‘ಚೆಕ್ಪೋಸ್ಟ್ನಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳಿ, ಚಿಮ್ಮನಚೋಡ್, ಸೇಡಂ ಹಾಗೂ ತೆಲಂಗಾಣ ರಾಜ್ಯದಿಂದ ಜಿಲ್ಲೆಗೆ ಬರುವ ಪ್ರಯಾಣಿಕರ ವಾಹನಗಳನ್ನು ಚೆಕ್ಪೋಸ್ಟ್ನಲ್ಲಿ ತಡೆದು ಮರಳಿ ಕಳಿಸಬೇಕು’ ಎಂದರು.</p>.<p>‘ಚೆಕ್ಪೋಸ್ಟ್ನಲ್ಲಿ ಪೊಲೀಸರು ದ್ವಿಚಕ್ರ ವಾಹನ ಸೇರಿದಂತೆ ಸಂಚರಿಸುವ ಎಲ್ಲ ರೀತಿಯ ವಾಹನಗಳನ್ನು ತಡೆಯುತ್ತಿರುವುದರಿಂದ ತಾಲ್ಲೂಕಿನೆಲ್ಲೆಡೆ ಜನದಟ್ಟಣೆ ಕಡಿಮೆಯಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ಕನಕ ಹೇಳಿದರು.</p>.<p>‘ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿಗಳು ಬೆಳಿಗ್ಗೆ 10 ಗಂಟೆ ನಂತರ ವಹಿವಾಟು ನಿಲ್ಲಿಸಿ ಅಂಗಡಿ ಮುಚ್ಚಿ ಲಾಕ್ಡೌನ್ಗೆ ಸಹಕರಿಸಬೇಕು’ ಎಂದು ವೃತ್ತ ನಿರೀಕ್ಷಕ ಅಮೂಲ್ ಕಾಳೆ ಸೂಚಿಸಿದರು.</p>.<p>ಬೇಮಳಖೇಡಾ ಪೊಲೀಸ್ ಠಾಣೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ:</strong> ಲಾಕ್ಡೌನ್ ಮೂರನೇ ದಿನ ಬುಧವಾರ ತಾಲ್ಲೂಕಿನ ಚಾಂಗಲೇರಾ ಗ್ರಾಮದ ಹೊರ ವಲಯದಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ನಲ್ಲಿ ವಾಹನಗಳು ತಡೆಯುವ ಕಾರ್ಯಕ್ಕೆ ತಹಶೀಲ್ದಾರ್ ಜಿಯಾವುಲ್ಲ ಚಾಲನೆ ನೀಡಿದರು.</p>.<p>‘ನಿತ್ಯ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಯಲು ಸರ್ಕಾರ ಕೈಗೊಂಡಿರುವ ಜಾರಿಗೊಳಿಸಿರುವ ಲಾಕ್ಡೌನ್ ಕಾರ್ಯ ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕಾಗಿರುವುದು ಎಲ್ಲ ನಾಗರಿಕರ, ಸರ್ಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ಅವರು ಹೇಳಿದರು.</p>.<p>‘ಚೆಕ್ಪೋಸ್ಟ್ನಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳಿ, ಚಿಮ್ಮನಚೋಡ್, ಸೇಡಂ ಹಾಗೂ ತೆಲಂಗಾಣ ರಾಜ್ಯದಿಂದ ಜಿಲ್ಲೆಗೆ ಬರುವ ಪ್ರಯಾಣಿಕರ ವಾಹನಗಳನ್ನು ಚೆಕ್ಪೋಸ್ಟ್ನಲ್ಲಿ ತಡೆದು ಮರಳಿ ಕಳಿಸಬೇಕು’ ಎಂದರು.</p>.<p>‘ಚೆಕ್ಪೋಸ್ಟ್ನಲ್ಲಿ ಪೊಲೀಸರು ದ್ವಿಚಕ್ರ ವಾಹನ ಸೇರಿದಂತೆ ಸಂಚರಿಸುವ ಎಲ್ಲ ರೀತಿಯ ವಾಹನಗಳನ್ನು ತಡೆಯುತ್ತಿರುವುದರಿಂದ ತಾಲ್ಲೂಕಿನೆಲ್ಲೆಡೆ ಜನದಟ್ಟಣೆ ಕಡಿಮೆಯಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ಕನಕ ಹೇಳಿದರು.</p>.<p>‘ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿಗಳು ಬೆಳಿಗ್ಗೆ 10 ಗಂಟೆ ನಂತರ ವಹಿವಾಟು ನಿಲ್ಲಿಸಿ ಅಂಗಡಿ ಮುಚ್ಚಿ ಲಾಕ್ಡೌನ್ಗೆ ಸಹಕರಿಸಬೇಕು’ ಎಂದು ವೃತ್ತ ನಿರೀಕ್ಷಕ ಅಮೂಲ್ ಕಾಳೆ ಸೂಚಿಸಿದರು.</p>.<p>ಬೇಮಳಖೇಡಾ ಪೊಲೀಸ್ ಠಾಣೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>