ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರನ್ನು ಮತ್ತೆ ಅದೇ ಸ್ಥಳದಲ್ಲಿ ಮುಂದುವರಿಸಲಾಗಿದೆ. ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅಂಗನವಾಡಿ ಹುದ್ದೆಗಳ ನೇಮಕ, ಪೌಷ್ಟಿಕ ಆಹಾರ ಕುರಿತು ಅನೇಕರು ದೂರು ಕೊಟ್ಟಿದ್ದಾರೆ. ಆದರೆ, ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಜಿಲ್ಲಾಡಳಿತ ಭಷ್ಟ ನೌಕರರನ್ನು ಪೋಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.