ಡಿಸೆಂಬರ್ 30ರವರೆಗೂ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇದೆ. ಬಿಜೆಪಿ ಮುಖಂಡರ ಭಾವಚಿತ್ರಗಳಿರುವ ಫಲಕವನ್ನು ಸಂಸದ ಭಗವಂತ ಖೂಬಾ ಅವರು ಹಾಕಿಸಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ಫಲಕಗಳನ್ನು ತೆರವುಗೊಳಿಸಬೇಕು ಎಂದು ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.