<p>ಇಸ್ಲಾಂಪುರ(ಜನವಾಡ): ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಶಿಥಿಲ ವಿದ್ಯುತ್ ಕಂಬ ಅಪಾಯ ಆಹ್ವಾನಿಸುತ್ತಿದೆ.</p>.<p>ಗ್ರಾಮದ ಬಸವೇಶ್ವರ ವೃತ್ತ ಸಮೀಪ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಕಾಂಕ್ರೀಟ್ ಉದುರಿದ್ದು, ಒಳಗಿನ ಕಬ್ಬಿಣದ ರಾಡುಗಳು ತುಕ್ಕು ಹಿಡಿದಿವೆ. ಕಂಬ ದುರ್ಬಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಲಕ್ಷಣಗಳಿವೆ ಎಂದು ಚಂದ್ರಕಾಂತ ಮಡಿವಾಳ, ದತ್ತಾತ್ರೇಯ ವಾಘಮಾರೆ ತಿಳಿಸಿದ್ದಾರೆ.</p>.<p>ಮಳೆ-ಗಾಳಿ ಬಂದರೆ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಶಿಥಿಲ ಕಂಬ ತೆರವುಗೊಳಿಸಿ ಹೊಸ ಕಂಬ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-33-1425057670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಸ್ಲಾಂಪುರ(ಜನವಾಡ): ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಶಿಥಿಲ ವಿದ್ಯುತ್ ಕಂಬ ಅಪಾಯ ಆಹ್ವಾನಿಸುತ್ತಿದೆ.</p>.<p>ಗ್ರಾಮದ ಬಸವೇಶ್ವರ ವೃತ್ತ ಸಮೀಪ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಕಾಂಕ್ರೀಟ್ ಉದುರಿದ್ದು, ಒಳಗಿನ ಕಬ್ಬಿಣದ ರಾಡುಗಳು ತುಕ್ಕು ಹಿಡಿದಿವೆ. ಕಂಬ ದುರ್ಬಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಲಕ್ಷಣಗಳಿವೆ ಎಂದು ಚಂದ್ರಕಾಂತ ಮಡಿವಾಳ, ದತ್ತಾತ್ರೇಯ ವಾಘಮಾರೆ ತಿಳಿಸಿದ್ದಾರೆ.</p>.<p>ಮಳೆ-ಗಾಳಿ ಬಂದರೆ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಶಿಥಿಲ ಕಂಬ ತೆರವುಗೊಳಿಸಿ ಹೊಸ ಕಂಬ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-33-1425057670</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>