<p><strong>ಬಸವಕಲ್ಯಾಣ</strong>: ‘ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಇತರೆ ಆಕಾಂಕ್ಷಿಗಳಲ್ಲಿ ಶರಣು ಸಲಗರ ಅಭ್ಯರ್ಥಿಯಾದ ಬಗ್ಗೆ ಅತೃಪ್ತಿ ಇಲ್ಲ. ಎಲ್ಲರೂ ಕ್ಷೇತ್ರದಲ್ಲಿ ಭರಾಟೆಯ ಪ್ರಚಾರ ಕೈಗೊಂಡಿದ್ದೇವೆ’ ಎಂದು ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾದ ಸೂರ್ಯಕಾಂತ ಚಿಲ್ಲಾಬಟ್ಟೆ ಹೇಳಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಡಾ.ಅಂಬೇಡ್ಕರ್ ಜಯಂತಿ ಆಚರಣೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಟಿಕೆಟ್ಗೆ ಪೈಪೋಟಿ ಇರುವುದು ಸಹಜ. ನಂತರದಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಪಕ್ಷವೇ ನಮಗೆಲ್ಲರಿಗೆ ಮುಖ್ಯವಾಗಿದೆ. ಆದ್ದರಿಂದ ಬಿಜೆಪಿ ಗೆಲುವಿಗೆ ಮುಖ್ಯಮಂತ್ರಿಯವರ, ಸಚಿವರ, ಪಕ್ಷದ ಮುಖಂಡರ, ಪದಾಧಿಕಾರಿಗಳ ಜತೆಯಲ್ಲಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೇವೆ. ಅಭ್ಯರ್ಥಿ ಶರಣು ಸಲಗರ 25 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸುವುದು ನಿಶ್ಚಿತ’ ಎಂದರು.</p>.<p>ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಪ್ರದೀಪ ವಾತಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಲತಾ ಹಾರಕೂಡೆ, ಸಂಜೀವ ಜಾಧವ, ಹಣಮಂತ ಧನಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಇತರೆ ಆಕಾಂಕ್ಷಿಗಳಲ್ಲಿ ಶರಣು ಸಲಗರ ಅಭ್ಯರ್ಥಿಯಾದ ಬಗ್ಗೆ ಅತೃಪ್ತಿ ಇಲ್ಲ. ಎಲ್ಲರೂ ಕ್ಷೇತ್ರದಲ್ಲಿ ಭರಾಟೆಯ ಪ್ರಚಾರ ಕೈಗೊಂಡಿದ್ದೇವೆ’ ಎಂದು ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾದ ಸೂರ್ಯಕಾಂತ ಚಿಲ್ಲಾಬಟ್ಟೆ ಹೇಳಿದರು.</p>.<p>ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಡಾ.ಅಂಬೇಡ್ಕರ್ ಜಯಂತಿ ಆಚರಣೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಟಿಕೆಟ್ಗೆ ಪೈಪೋಟಿ ಇರುವುದು ಸಹಜ. ನಂತರದಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಪಕ್ಷವೇ ನಮಗೆಲ್ಲರಿಗೆ ಮುಖ್ಯವಾಗಿದೆ. ಆದ್ದರಿಂದ ಬಿಜೆಪಿ ಗೆಲುವಿಗೆ ಮುಖ್ಯಮಂತ್ರಿಯವರ, ಸಚಿವರ, ಪಕ್ಷದ ಮುಖಂಡರ, ಪದಾಧಿಕಾರಿಗಳ ಜತೆಯಲ್ಲಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೇವೆ. ಅಭ್ಯರ್ಥಿ ಶರಣು ಸಲಗರ 25 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸುವುದು ನಿಶ್ಚಿತ’ ಎಂದರು.</p>.<p>ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಪ್ರದೀಪ ವಾತಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಲತಾ ಹಾರಕೂಡೆ, ಸಂಜೀವ ಜಾಧವ, ಹಣಮಂತ ಧನಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>