ಬೀದರ್: ಪ್ರವಾದಿ ಮಹಮ್ಮದರ ಜೀವನ ಹಾಗೂ ಸಂದೇಶಗಳನ್ನು ಜನರಿಗೆ ಪರಿಚಯಿಸುವ ದಿಸೆಯಲ್ಲಿ ಜಮಾ ಅತೆ ಇಸ್ಲಾಮಿ ಹಿಂದ್ ಅಕ್ಟೋಬರ್ 26 ರವರೆಗೆ ರಾಜ್ಯದಾದ್ಯಂತ ಅಭಿಯಾನ ಹಮ್ಮಿಕೊಂಡಿದೆ.
ಅಭಿಯಾನವು ವೈಯಕ್ತಿಕ ಭೇಟಿ, ಪುಸ್ತಕ ವಿತರಣೆ, ಸಾರ್ವಜನಿಕ ಸಭೆ, ಸ್ವಚ್ಛತಾ ಕಾರ್ಯಕ್ರಮಗಳನ್ನು ಒಳಗೊಳ್ಳಲಿದೆ ಎಂದು ಜಮಾ ಅತೆ ಇಸ್ಲಾಮಿ ಹಿಂದ್ನ ಬೀದರ್ ಘಟಕದ ಅಧ್ಯಕ್ಷ ಸೈಯದ್ ಅಬ್ದುಲ್ ಸತ್ತಾರ್ ತಿಳಿಸಿದ್ದಾರೆ.
ಅ. 24 ರಂದು ಬೆಳಿಗ್ಗೆ 11ಕ್ಕೆ ನಗರದ ಹೊಟೇಲ್ ಬೀದರ್ ಗೇಟ್ವೇನಲ್ಲಿ ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.