<p><strong>ರೇಕುಳಗಿ(ಜನವಾಡ)</strong>: ಅರಾವಳಿ ಪರ್ವತ ಶ್ರೇಣಿ ನಾಶಕ್ಕೆ ಅವಕಾಶ ಕೊಡಬಾರದು ಎಂದು ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಉಪ ಹಣಕಾಸು ನಿಯಂತ್ರಣಾಧಿಕಾರಿ ವೀರಭದ್ರಪ್ಪ ಉಪ್ಪಿನ್ ಒತ್ತಾಯಿಸಿದರು.</p>.<p>ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದಲ್ಲಿ ಗುರುವಾರ ನಡೆದ ‘ಅರಾವಳಿ ಪರ್ವತ ಶ್ರೇಣಿ ಉಳಿಸಿ’ ಜಾಗೃತಿ ಅಭಿಯಾನ ಉದ್ದೇಶಿಸಿ ಅವರು ಮಾತನಾಡಿದರು.</p>.<p>ರಾಜಸ್ತಾನ, ಗುಜರಾತ್, ಹರಿಯಾಣ ಹಾಗೂ ದೆಹಲಿ ರಾಜ್ಯಗಳಲ್ಲಿ 670 ಕಿ.ಮೀ ಉದ್ದ ಹರಡಿರುವ ಅರಾವಳಿ ಪರ್ವತ ಶ್ರೇಣಿ ನಾಲ್ಕೂ ರಾಜ್ಯಗಳಿಗೆ ರಕ್ಷಾ ಕವಚವಿದ್ದಂತೆ. ಇದನ್ನು ನಾಶಪಡಿಸಿ, ಗಣಿಗಾರಿಕೆ ಹಾಗೂ ನಗರೀಕರಣಕ್ಕೆ ಅವಕಾಶ ಕಲ್ಪಿಸುವ ಕಾಯ್ದೆ ರೂಪಿಸುವ ಪ್ರಸ್ತಾವವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಇದೇ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಿಸಲಾಯಿತು.</p>.<p>ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ, ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಾತನಾಡಿದರು.</p>.<p>ಸಮಿತಿಯ ಕಾರ್ಯದರ್ಶಿ ನಾಗಶೆಟ್ಟೆಪ್ಪ ಹಚ್ಚಿ, ಪ್ರಮುಖರಾದ ರಾಜಶೇಖರ ಬುಸ್ಸಾ, ಯುಸೂಫ್ ಅಲಿ, ಉಮಾದೇವಿ, ಗುರುನಾಥ, ಜೈಶ್ರೀ, ಜಗದೇವಿ, ರಾಜಶ್ರೀ, ಕಲಾವತಿ, ಸುಬ್ಬಮ್ಮ, ಶಾಂತಮ್ಮ, ಸುಧಾ, ಸವಿತಾ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೇಕುಳಗಿ(ಜನವಾಡ)</strong>: ಅರಾವಳಿ ಪರ್ವತ ಶ್ರೇಣಿ ನಾಶಕ್ಕೆ ಅವಕಾಶ ಕೊಡಬಾರದು ಎಂದು ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಉಪ ಹಣಕಾಸು ನಿಯಂತ್ರಣಾಧಿಕಾರಿ ವೀರಭದ್ರಪ್ಪ ಉಪ್ಪಿನ್ ಒತ್ತಾಯಿಸಿದರು.</p>.<p>ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದಲ್ಲಿ ಗುರುವಾರ ನಡೆದ ‘ಅರಾವಳಿ ಪರ್ವತ ಶ್ರೇಣಿ ಉಳಿಸಿ’ ಜಾಗೃತಿ ಅಭಿಯಾನ ಉದ್ದೇಶಿಸಿ ಅವರು ಮಾತನಾಡಿದರು.</p>.<p>ರಾಜಸ್ತಾನ, ಗುಜರಾತ್, ಹರಿಯಾಣ ಹಾಗೂ ದೆಹಲಿ ರಾಜ್ಯಗಳಲ್ಲಿ 670 ಕಿ.ಮೀ ಉದ್ದ ಹರಡಿರುವ ಅರಾವಳಿ ಪರ್ವತ ಶ್ರೇಣಿ ನಾಲ್ಕೂ ರಾಜ್ಯಗಳಿಗೆ ರಕ್ಷಾ ಕವಚವಿದ್ದಂತೆ. ಇದನ್ನು ನಾಶಪಡಿಸಿ, ಗಣಿಗಾರಿಕೆ ಹಾಗೂ ನಗರೀಕರಣಕ್ಕೆ ಅವಕಾಶ ಕಲ್ಪಿಸುವ ಕಾಯ್ದೆ ರೂಪಿಸುವ ಪ್ರಸ್ತಾವವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಇದೇ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಿಸಲಾಯಿತು.</p>.<p>ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ, ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಾತನಾಡಿದರು.</p>.<p>ಸಮಿತಿಯ ಕಾರ್ಯದರ್ಶಿ ನಾಗಶೆಟ್ಟೆಪ್ಪ ಹಚ್ಚಿ, ಪ್ರಮುಖರಾದ ರಾಜಶೇಖರ ಬುಸ್ಸಾ, ಯುಸೂಫ್ ಅಲಿ, ಉಮಾದೇವಿ, ಗುರುನಾಥ, ಜೈಶ್ರೀ, ಜಗದೇವಿ, ರಾಜಶ್ರೀ, ಕಲಾವತಿ, ಸುಬ್ಬಮ್ಮ, ಶಾಂತಮ್ಮ, ಸುಧಾ, ಸವಿತಾ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>