ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಚನ್ನಬಸಪ್ಪ ಹಾಲಹಳ್ಳಿ, ಸಾಹಿತಿ ಶ್ರೀಶೈಲ ನಾಗರಾಳ, ಬಿ.ಜಿ. ಶೆಟಕಾರ್ ಪಾಲ್ಗೊಳ್ಳುವರು. ಕೃತಿಯ ಪ್ರಧಾನ ಸಂಪಾದಕ ಪ್ರೊ. ಕಲ್ಯಾಣರಾವ್ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಕರ್ನಾಟಕ ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ತಿಳಿಸಿದ್ದಾರೆ.