ಜನವಾಡ: ಬೀದರ್ ತಾಲ್ಲೂಕಿನ ಕಪಲಾಪೂರ(ಎ) ಗ್ರಾಮದಲ್ಲಿ ನವೆಂಬರ್ 14 ಮತ್ತು 15 ರಂದು ಜೈ ಸಂತೋಷಿ ಮಾತಾ ಮಂದಿರದ ಜಾತ್ರಾ ಮಹೋತ್ಸವ ನಡೆಯಲಿದೆ.
14ರಂದು ಬೆಳಿಗ್ಗೆ 7 ರಿಂದ 9 ರವರೆಗೆ ಪಾದಪೂಜೆ, ಆರತಿ, ಭಜನೆ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ 108 ದಂಪತಿಗಳಿಂದ ಹೋಮ ಹವನ ನಡೆಯಲಿದೆ.
ನವೆಂಬರ್ 15 ರಂದು ಬೆಳಿಗ್ಗೆ 9 ರಿಂದ 10 ರ ವರೆಗೆ ಅಭಿಷೇಕ, ಉಡಿ ತುಂಬುವ ಕಾರ್ಯಕ್ರಮ, ಬೆಳಿಗ್ಗೆ 10 ರಿಂದ 11 ರ ವರೆಗೆ ಹೋಮ, ಪಲ್ಲಕ್ಕಿ ಮೆರವಣಿಗೆ, ಮಧ್ಯಾಹ್ನ 12 ಗಂಟೆಗೆ ಆರತಿ ನಡೆಯಲಿದೆ.
ಆರತಿ ಕಾರ್ಯಕ್ರಮದಲ್ಲಿ ತಮಲೂರಿನ ಶಿವಾನಂದ ಶಿವಾಚಾರ್ಯ, ಶಾಸಕರಾದ ಬಂಡೆಪ್ಪ ಕಾಶೆಂಪೂರ ಹಾಗೂ ಈಶ್ವರ ಖಂಡ್ರೆ ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ ದೀಪೋತ್ಸವ ನಡೆಯಲಿದೆ ಎಂದು ಮಂದಿರದ ವ್ಯವಸ್ಥಾಪಕ ತಿಳಿಸಿದ್ದಾರೆ.