<p>ಚಿಟಗುಪ್ಪ: ಇಲ್ಲಿಯ ಗೌರಿಬಾಯಿ ಅಗ್ರವಾಲ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಿಸಲಾಯಿತು.</p>.<p>ಪ್ರಾಚಾರ್ಯ ವಿಜಯಕುಮಾರ ಪಾಟೀಲ ಅವರು ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಿ ಮಾತನಾಡಿ,‘ಜಯಂತಿಗಳು ಜೀವನಕ್ಕೆ ಬೆಳಕಾಗಬೇಕು. ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಜೀವನಕ್ಕೆ ಅರ್ಥ ಬರುತ್ತದೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.</p>.<p>ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಜಾನಪದ ಶೈಲಿಯ ಸಮೂಹ ನೃತ್ಯ, ಕೋಲಾಟ, ಕುಣಿತ ಕಲೆ ಪ್ರದರ್ಶಿಸಿದರು.</p>.<p>ಮುಖ್ಯ ಶಿಕ್ಷಕರಾದ ರತ್ನಪ್ಪ ನೇಲವಾಳ, ಅಶೋಕ ಮಠಪತಿ, ಡಿ.ಶಂಕರ್, ಉಪನ್ಯಾಸಕರಾದ ಆನಂದ ರಾಜು, ಪ್ರೇಮಲತಾ ಸ್ವಾಮಿ, ಭೀಮಶಾ ಕೆರಳಿ, ಸುಮಂಗಲಾ, ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು, ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಇದ್ದರು.</p>.<p>ನೀಲಕಂಠ ಇಸ್ಲಾಮಪುರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಟಗುಪ್ಪ: ಇಲ್ಲಿಯ ಗೌರಿಬಾಯಿ ಅಗ್ರವಾಲ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಿಸಲಾಯಿತು.</p>.<p>ಪ್ರಾಚಾರ್ಯ ವಿಜಯಕುಮಾರ ಪಾಟೀಲ ಅವರು ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಿ ಮಾತನಾಡಿ,‘ಜಯಂತಿಗಳು ಜೀವನಕ್ಕೆ ಬೆಳಕಾಗಬೇಕು. ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಜೀವನಕ್ಕೆ ಅರ್ಥ ಬರುತ್ತದೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.</p>.<p>ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಜಾನಪದ ಶೈಲಿಯ ಸಮೂಹ ನೃತ್ಯ, ಕೋಲಾಟ, ಕುಣಿತ ಕಲೆ ಪ್ರದರ್ಶಿಸಿದರು.</p>.<p>ಮುಖ್ಯ ಶಿಕ್ಷಕರಾದ ರತ್ನಪ್ಪ ನೇಲವಾಳ, ಅಶೋಕ ಮಠಪತಿ, ಡಿ.ಶಂಕರ್, ಉಪನ್ಯಾಸಕರಾದ ಆನಂದ ರಾಜು, ಪ್ರೇಮಲತಾ ಸ್ವಾಮಿ, ಭೀಮಶಾ ಕೆರಳಿ, ಸುಮಂಗಲಾ, ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು, ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಇದ್ದರು.</p>.<p>ನೀಲಕಂಠ ಇಸ್ಲಾಮಪುರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>