ಪ್ರಜ್ವಲ್ ರೇವಣ್ಣ, ಎಚ್.ಡಿ. ರೇವಣ್ಣರ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಲಿದೆ. ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಜೊತೆಗೆ ಕಬಿನಿಗೆ ಹೋಗಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ.ರೇವಣ್ಣ, ಕುಮಾರಣ್ಣನವರ ಕುಟುಂಬದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಇಲ್ಲ. ಅವರೆಲ್ಲ ಅಣ್ಣ - ತಮ್ಮಂದಿರು ಚೆನ್ನಾಗಿದ್ದಾರೆ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.