<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಬಸವಕಲ್ಯಾಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯಿಂದ ₹10 ಕೋಟಿ ಪಡೆದಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. ಅವರಿಗೆ ಅಲ್ಲಾನ ಮೇಲೆ ನಂಬಿಕೆ ಇದ್ದರೆ ಅದನ್ನು ಸಾಬೀತು ಮಾಡಲಿ’ ಎಂದು ಜೆಡಿಎಸ್ ಮುಖಂಡಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.</p>.<p>‘ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದೆ ಕಡೆಗಣಿಸಲಾಗಿದೆ ಎಂಬ ಕಾರಣಕ್ಕೆ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆಯೇ ಹೊರತು ಬೇರೆ ಉದ್ದೇಶವಿಲ್ಲ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಈ ಕ್ಷೇತ್ರದಲ್ಲಿ 7 ಬಾರಿ ಜನತಾ ಪರಿವಾರದ ಅಭ್ಯರ್ಥಿ ಗೆದ್ದಿದ್ದು, ಇದು ಜೆಡಿಎಸ್ ಭದ್ರಕೋಟೆಯಾಗಿದೆ. ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಕಾರಣಕ್ಕೆ ಒಂದು ವಾರ ಇಲ್ಲಿಯೇ ಠಿಕಾಣಿ ಹೂಡಲಿದ್ದೇನೆ’ ಎಂದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕ್ಷೇತ್ರವನ್ನು ದತ್ತು ಪಡೆದು ಉದ್ಧಾರ ಮಾಡುವುದಾಗಿಸುಳ್ಳು ಭರವಸೆ ನೀಡಿದ್ದಾರೆ. ಚುನಾವಣೆ ಬಂದಾಗ, ಸ್ವರ್ಗ ಇಳಿಸುವೆ ಎನ್ನುವ ಅವರು ನಂತರ ಕ್ಷೇತ್ರವನ್ನೇ ಮರೆಯುತ್ತಾರೆ. ಈವರೆಗೆ ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ, ಯಾವುದೇ ಕೆಲಸ ಮಾಡಿಲ್ಲ’ ಎಂದು ದೂರಿದರು.</p>.<p>‘ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ. ಯೋಜನೆಗಳಿಗೆ ನೀಡಲು ಹಣ ಇಲ್ಲ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಯಾದ ಯೋಜನೆಗಳ ಅನುದಾನವನ್ನಾದರೂ ಬಿಡುಗಡೆಗೊಳಿಸುವಂತೆ ಬಹುತೇಕ ಶಾಸಕರು ಕೋರುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ಹೂಡಿದ್ದು ಅವರಿಗೆ ವೇತನ ಹೆಚ್ಚಳವಾಗಬೇಕು ಎಂದು ನಾನೂ ಆಗ್ರಹಿಸುವೆ. ಆದರೂ ಸರ್ಕಾರ ಸ್ಪಂದಿಸುತ್ತಿಲ್ಲ. ವೇತನ ಹೆಚ್ಚಳಕ್ಕೆ ₹700 ಕೋಟಿ ಬೇಕಾಗಬಹುದು’ ಎಂದರು.</p>.<p>ಶಾಸಕ ಬಂಡೆಪ್ಪ ಕಾಶೆಂಪೂರ, ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೊಲಪುರ, ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರಪಾಶಾ ಮುಜಾವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಬಸವಕಲ್ಯಾಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯಿಂದ ₹10 ಕೋಟಿ ಪಡೆದಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. ಅವರಿಗೆ ಅಲ್ಲಾನ ಮೇಲೆ ನಂಬಿಕೆ ಇದ್ದರೆ ಅದನ್ನು ಸಾಬೀತು ಮಾಡಲಿ’ ಎಂದು ಜೆಡಿಎಸ್ ಮುಖಂಡಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.</p>.<p>‘ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದೆ ಕಡೆಗಣಿಸಲಾಗಿದೆ ಎಂಬ ಕಾರಣಕ್ಕೆ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆಯೇ ಹೊರತು ಬೇರೆ ಉದ್ದೇಶವಿಲ್ಲ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಈ ಕ್ಷೇತ್ರದಲ್ಲಿ 7 ಬಾರಿ ಜನತಾ ಪರಿವಾರದ ಅಭ್ಯರ್ಥಿ ಗೆದ್ದಿದ್ದು, ಇದು ಜೆಡಿಎಸ್ ಭದ್ರಕೋಟೆಯಾಗಿದೆ. ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಕಾರಣಕ್ಕೆ ಒಂದು ವಾರ ಇಲ್ಲಿಯೇ ಠಿಕಾಣಿ ಹೂಡಲಿದ್ದೇನೆ’ ಎಂದರು.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕ್ಷೇತ್ರವನ್ನು ದತ್ತು ಪಡೆದು ಉದ್ಧಾರ ಮಾಡುವುದಾಗಿಸುಳ್ಳು ಭರವಸೆ ನೀಡಿದ್ದಾರೆ. ಚುನಾವಣೆ ಬಂದಾಗ, ಸ್ವರ್ಗ ಇಳಿಸುವೆ ಎನ್ನುವ ಅವರು ನಂತರ ಕ್ಷೇತ್ರವನ್ನೇ ಮರೆಯುತ್ತಾರೆ. ಈವರೆಗೆ ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ, ಯಾವುದೇ ಕೆಲಸ ಮಾಡಿಲ್ಲ’ ಎಂದು ದೂರಿದರು.</p>.<p>‘ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ. ಯೋಜನೆಗಳಿಗೆ ನೀಡಲು ಹಣ ಇಲ್ಲ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಯಾದ ಯೋಜನೆಗಳ ಅನುದಾನವನ್ನಾದರೂ ಬಿಡುಗಡೆಗೊಳಿಸುವಂತೆ ಬಹುತೇಕ ಶಾಸಕರು ಕೋರುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ಹೂಡಿದ್ದು ಅವರಿಗೆ ವೇತನ ಹೆಚ್ಚಳವಾಗಬೇಕು ಎಂದು ನಾನೂ ಆಗ್ರಹಿಸುವೆ. ಆದರೂ ಸರ್ಕಾರ ಸ್ಪಂದಿಸುತ್ತಿಲ್ಲ. ವೇತನ ಹೆಚ್ಚಳಕ್ಕೆ ₹700 ಕೋಟಿ ಬೇಕಾಗಬಹುದು’ ಎಂದರು.</p>.<p>ಶಾಸಕ ಬಂಡೆಪ್ಪ ಕಾಶೆಂಪೂರ, ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೊಲಪುರ, ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರಪಾಶಾ ಮುಜಾವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>