ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಪಿ.ಜಿ.ಆರ್‌. ಸಿಂಧ್ಯಾ

Last Updated 30 ಮಾರ್ಚ್ 2021, 15:34 IST
ಅಕ್ಷರ ಗಾತ್ರ

ಬಸವಕಲ್ಯಾಣ: ಜೆಡಿಎಸ್‌ ಮುಖಂಡ ಪಿ.ಜಿ.ಆರ್‌. ಸಿಂಧ್ಯಾ ಅವರು ಇಲ್ಲಿ ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು‌ ಸಿಂಧ್ಯಾ ಅವರಿಗೆ ಪಕ್ಷದ ಧ್ವಜ ಕೊಟ್ಟು ಬರ ಮಾಡಿಕೊಂಡರು.

‘ಕಳೆದ ಬಾರಿ ಈ ಕ್ಷೇತ್ರದಿಂದ ಗೆದ್ದಿದ್ದ ಬಿ.ನಾರಾಯಣರಾವ್‌ ನನ್ನ ಆಶೀರ್ವಾದ ಪಡೆದಿದ್ದರು. ನಾನು ನಾರಾಯಣರಾವ್ ವಿರುದ್ಧ ಸ್ಪರ್ಧಿಸಿ ತಪ್ಪು ಮಾಡಿದ್ದೆ. ಹೀಗಾಗಿ ಅವರ ಪತ್ನಿ ಪರ ಪ್ರಚಾರಕ್ಕೆ ಬಂದಿದ್ದೇನೆ’ ಎಂದು ಸಿಂಧ್ಯಾ ಹೇಳಿದರು.

ಈ ಕ್ಷೇತ್ರದಲ್ಲಿ ಮರಾಠ ಸಮುದಾಯದ ಮತಗಳೂ ಹೆಚ್ಚಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಂಧ್ಯಾ ಇಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ 14 ಸಾವಿರದಷ್ಟು ಮತ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT