ಮುಖಂಡರಾದ ಜಗದೀಶ್ವರ ಬಿರಾದಾರ, ಅನಿಲ್ಕುಮಾರ ಬೇಲ್ದಾರ್ ಮಾತನಾಡಿ, ‘ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣನವರ ರಾಕ್ಷಸಿಕೃತ್ಯದಿಂದ ದೇಶದ ಮಾನ ಹರಾಜಾಗಿದೆ. ದೇವೇಗೌಡರು ಈ ಘಟನೆಯನ್ನು ಖಂಡಿಸಿಲ್ಲ. ಬಿಜೆಪಿಯವರು ಬಾಯಿ ಬಿಚ್ಚಿಲ್ಲ. ಸಂತ್ರಸ್ತೆಯರ ಮೇಲೆ ಒತ್ತಡ ಹಾಕುವ ಕೆಲಸ ನಡೆದಿದೆ. ಕೂಡಲೇ ಸರ್ಕಾರವು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಪ್ರಕರಣದಲ್ಲಿ ಭಾಗಿಯಾದವರಿಗೆ ಕಾನೂನಿನ ಪ್ರಕಾರ ಶಿಕ್ಷಿಸಬೇಕು. ಇದರಲ್ಲಿ ರಾಜಕೀಯ ಮಾಡಬಾರದು’ ಎಂದು ಒತ್ತಾಯಿಸಿದರು.