ಬೀದರ್: ಬೀದರ್ ಉತ್ಸವ ನಿಮಿತ್ತ ಜಿಲ್ಲಾ ಆಡಳಿತದ ಸಹಯೋಗದಲ್ಲಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳದ ಸಿದ್ಧತೆಯನ್ನು ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ನಿರ್ದೇಶಕ ತರುಣ್ ಸೂರ್ಯಕಾಂತ ನಾಗಮಾರಪಳ್ಳಿ ಪರಿಶೀಲಿಸಿದರು.
ಸಿಬ್ಬಂದಿಯಿಂದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನೋಡಲ್ ಅಧಿಕಾರಿ ಬಸವರಾಜ, ಮಲೀಕ್ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾವಂತ ನಿರುದ್ಯೋಗಿ ಯುವಕರಿಗಾಗಿ ಸೂರ್ಯಕಾಂತ ನಾಗಮಾರಪಳ್ಳಿ ಅವರು ಎರಡನೇ ಬಾರಿಗೆ ನಗರದಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಮೇಳ ಹಮ್ಮಿಕೊಂಡಿದ್ದಾರೆ. ಬಿ.ವಿ. ಭೂಮರಡ್ಡಿ ಕಾಲೇಜು ಮೈದಾನದಲ್ಲಿ ದಿ. 7 ರಂದು ಮೇಳ ನಡೆಯಲಿದ್ದು, 80 ಕ್ಕೂ ಹೆಚ್ಚು ಕಂಪೆನಿಗಳ ಪ್ರತಿನಿಧಿಗಳು ಪಾಲ್ಗೊಳ್ಳುವರು.