ನಗರದಲ್ಲಿ ಶನಿವಾರ ಪೊಲೀಸ್ ಬಂದೋಬಸ್ತ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕಕುಮಾರ ಕರಂಜೆ ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಕೋರ್ಟ್ ಆದೇಶದಂತೆ ನಾನೇ ಅಧ್ಯಕ್ಷ ಎಂದು ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಕೋರ್ಟ್ ಆದೇಶದ ಪ್ರತಿ ನನಗೆ ಬಂದಿಲ್ಲ. ಅಲ್ಲದೇ ರಾಜ್ಯ ಘಟಕದಿಂದಲೂ ಯಾವುದೇ ಆದೇಶ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.