‘ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬೀದರ್ನಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕು ಎಂದು ಸಿದ್ಧೇಶ್ವರ ಗ್ರಾಮಸ್ಥರು ನನಗೆ ಮನವಿ ಸಲ್ಲಿಸಿದ್ದರು. ವ್ಯಾಜ್ಯ ಪೂರ್ವ ಪ್ರಕರಣ ದಾಖಲಿಸಿಕೊಂಡು, ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅವರ ಗಮನಕ್ಕೆ ತಂದಿದ್ದೆ. ಎರಡು ಗಂಟೆಗಳಲ್ಲೇ ಬೀದರ್-ಭಾಲ್ಕಿ ವಯಾ ಸಿದ್ಧೇಶ್ವರ ಹೊಸ ಬಸ್ ವ್ಯವಸ್ಥೆ ಮಾಡಿದ್ದಾರೆ’ ಎಂದು ಎಸ್.ಕೆ. ಕನಕಟ್ಟೆ ತಿಳಿಸಿದರು.