ರಾಜಶೇಖರ ಅವರನ್ನು ಕೋವಿಡ್ 19 ರೋಗಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ, ಅವರು ಸಂಪರ್ಕಕ್ಕೆ ಬಂದವರ ಮನೆಗೆ ಭೇಟಿ ಕೊಟ್ಟು ವಿವರಗಳನ್ನು ಪಡೆಯದೆ, ಪ್ರಾಥಮಿಕ ಸಂಪರ್ಕಕ್ಕೆ ಬಂದ ಮಹಿಳೆಯನ್ನು ಮೊಬೈಲ್ನಲ್ಲಿ ಸಂಪರ್ಕಿಸಿ, ದ್ವಿತೀಯ ಸಂಪರ್ಕಕ್ಕೆ ಬಂದ ಯಾವುದಾದರೂ ಹೆಸರುಗಳನ್ನು ಕೊಡಲು ತಿಳಿಸಿದ್ದರು. ಕರ್ತವ್ಯ ಲೋಪ ಎಸಗಿದ ಕಾರಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.