<p><strong>ಬೀದರ್:</strong> ನಗರದ ನ್ಯೂ ಆದರ್ಶ ಕಾಲೊನಿಯ ಎರಡು ಮಳಿಗೆಗಳಲ್ಲಿ ಭಾನುವಾರ (ಆ.10) ನಡೆದ ಕಳ್ಳತನ ಪ್ರಕರಣವನ್ನು ಇಲ್ಲಿನ ಗಾಂಧಿ ಗಂಜ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಘಟನೆ ಸಂಬಂಧ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಬಂಧಿಸಿ, ಬಾಲ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.</p><p>ಬಾಲಕನಿಂದ ₹4.65 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಒಂದು ಐಫೋನ್, ಎರಡು ಕೆನಾನ್ ಕಂಪನಿಯ ಕ್ಯಾಮೆರಾಗಳು, ಒಂದು ಹಾರ್ಡ್ ಡಿಸ್ಕ್, ಒಂದು ಲ್ಯಾಪ್ಟಾಪ್, ಮೊಬೈಲ್ ಬಿಡಿಭಾಗಗಳು, 11 ಹಳೆಯ ಮೊಬೈಲ್ಗಳು, ಒಂದು ಟ್ಯಾಬ್, ಕೃತ್ಯಕ್ಕೆ ಬಳಸಿದ ಸ್ಪ್ಲೆಂಡರ್ ಬೈಕ್ ಸೇರಿದೆ.</p><p>‘ನಗರದ ನ್ಯೂ ಆದರ್ಶ ಕಾಲೊನಿಯ ಎರಡು ಎಲೆಕ್ಟ್ರಾನಿಕ್ಸ್ ಮಳಿಗೆಗಳಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿತ್ತು. ಬಳಿಕ ಮಳಿಗೆಯೊಂದಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನಿಸಲಾಗಿತ್ತು. ಮಳಿಗೆಯ ಸಮೀಪದ ಮನೆಯೊಂದರ ಬಾಲಕ ಈ ಕೃತ್ಯ ಎಸಗಿದ್ದಾನೆ. ಮನೆಯಲ್ಲಿ ಪೋಷಕರಿಗೆ ಹಣ ಕೇಳಿದ್ದಾನೆ. ಅವರು ಕೊಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ. ಕಳ್ಳತನ ಹಾಗೂ ಬೆಂಕಿ ಹಚ್ಚಿರುವುದಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ, ಬಾಲ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.</p><p>ಡಿವೈಎಸ್ಪಿ ಶಿವನಗೌಡ ಪಾಟೀಲ ಮಾರ್ಗದರ್ಶನದಲ್ಲಿ ಗಾಂಧಿಗಂಜ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆನಂದರಾವ್ ಎಸ್.ಎನ್., ಪಿಎಸ್ಐ ವಿದ್ಯವಾನ್, ಸಿಬ್ಬಂದಿ ಅನಿಲ್, ಮನೋಜ್, ಇರ್ಫಾನ್, ಗಂಗಾಧರ, ಸುಧಾಕರ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು. 48 ಗಂಟೆಗಳಲ್ಲಿ ಈ ತಂಡ ಪ್ರಕರಣ ಭೇದಿಸಿ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವಾನಂದ ಪವಾಡಶೆಟ್ಟಿ, ಶಿವನಗೌಡ ಪಾಟೀಲ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ನ್ಯೂ ಆದರ್ಶ ಕಾಲೊನಿಯ ಎರಡು ಮಳಿಗೆಗಳಲ್ಲಿ ಭಾನುವಾರ (ಆ.10) ನಡೆದ ಕಳ್ಳತನ ಪ್ರಕರಣವನ್ನು ಇಲ್ಲಿನ ಗಾಂಧಿ ಗಂಜ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಘಟನೆ ಸಂಬಂಧ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಬಂಧಿಸಿ, ಬಾಲ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.</p><p>ಬಾಲಕನಿಂದ ₹4.65 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಒಂದು ಐಫೋನ್, ಎರಡು ಕೆನಾನ್ ಕಂಪನಿಯ ಕ್ಯಾಮೆರಾಗಳು, ಒಂದು ಹಾರ್ಡ್ ಡಿಸ್ಕ್, ಒಂದು ಲ್ಯಾಪ್ಟಾಪ್, ಮೊಬೈಲ್ ಬಿಡಿಭಾಗಗಳು, 11 ಹಳೆಯ ಮೊಬೈಲ್ಗಳು, ಒಂದು ಟ್ಯಾಬ್, ಕೃತ್ಯಕ್ಕೆ ಬಳಸಿದ ಸ್ಪ್ಲೆಂಡರ್ ಬೈಕ್ ಸೇರಿದೆ.</p><p>‘ನಗರದ ನ್ಯೂ ಆದರ್ಶ ಕಾಲೊನಿಯ ಎರಡು ಎಲೆಕ್ಟ್ರಾನಿಕ್ಸ್ ಮಳಿಗೆಗಳಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿತ್ತು. ಬಳಿಕ ಮಳಿಗೆಯೊಂದಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನಿಸಲಾಗಿತ್ತು. ಮಳಿಗೆಯ ಸಮೀಪದ ಮನೆಯೊಂದರ ಬಾಲಕ ಈ ಕೃತ್ಯ ಎಸಗಿದ್ದಾನೆ. ಮನೆಯಲ್ಲಿ ಪೋಷಕರಿಗೆ ಹಣ ಕೇಳಿದ್ದಾನೆ. ಅವರು ಕೊಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ. ಕಳ್ಳತನ ಹಾಗೂ ಬೆಂಕಿ ಹಚ್ಚಿರುವುದಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ, ಬಾಲ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.</p><p>ಡಿವೈಎಸ್ಪಿ ಶಿವನಗೌಡ ಪಾಟೀಲ ಮಾರ್ಗದರ್ಶನದಲ್ಲಿ ಗಾಂಧಿಗಂಜ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆನಂದರಾವ್ ಎಸ್.ಎನ್., ಪಿಎಸ್ಐ ವಿದ್ಯವಾನ್, ಸಿಬ್ಬಂದಿ ಅನಿಲ್, ಮನೋಜ್, ಇರ್ಫಾನ್, ಗಂಗಾಧರ, ಸುಧಾಕರ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು. 48 ಗಂಟೆಗಳಲ್ಲಿ ಈ ತಂಡ ಪ್ರಕರಣ ಭೇದಿಸಿ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವಾನಂದ ಪವಾಡಶೆಟ್ಟಿ, ಶಿವನಗೌಡ ಪಾಟೀಲ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>