<p>ಬೀದರ್: ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಜನ್ಮದಿನದ ಅಂಗವಾಗಿ ಏ. 11ರಂದು ಸಂಜೆ 5ಕ್ಕೆ ತೆಲಂಗಾಣದ ಹೈದರಾಬಾದಿನ ಕುತ್ತಬುಳ್ಳಾಪುರ ಮುನ್ಸಿಪಾಲಿಟಿ ಕಚೇರಿ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಭೀಮರಾಜ ಸೇನಾ ಸಂಸ್ಥಾಪಕ ಅಧ್ಯಕ್ಷ ರಾಜೇಶ ಕಾಂಬಳೆ ತಿಳಿಸಿದರು.</p>.<p>ಸಮಾಜದಲ್ಲಿ ಸಮಾನತೆ, ಏಕತೆ ಮತ್ತು ನ್ಯಾಯದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ ಬಂಧು ಅಠಾವಳೆ, ಭಂತೆ ಹರ್ಷಬೋಧಿ (ಭಂತೆಜಿ) ಪಾಲ್ಗೊಳ್ಳುವರು. ಭೀಮರಾಜ ಸೇನಾದಿಂದ ಈಗಾಗಲೇ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ಮಹಾತ್ಮ ಫುಲೆ ಅವರ ಪರಂಪರೆಯನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಚಿಂತನೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಬನ್ನಿ, ಪ್ರೇರಣೆ ಪಡೆಯಿರಿ, ಬದಲಾವಣೆಯ ಭಾಗವಾಗಿರಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಬಳೆ ಕೋರಿದರು.</p>.<p>ಬೀಮರಾಜ ಸೇನಾ ಸಂಘಟನೆಯ ಪ್ರಮುಖರಾದ ಅಶೋಕ ಕಾಂಬಳೆ, ಪ್ರಲ್ಹಾದ ದೊಡ್ಡಿ, ಹರ್ಷಿತ ದಂಡೇಕರ್, ಪ್ರಕಾಶ ರಾವಣ, ದಿಲೀಪ ರೇಖಿ, ರಾಜು ಜಾತೋತ್, ಶಿವು ಸಾಗರ, ಅಶೋಕ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-33-1022342995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಜನ್ಮದಿನದ ಅಂಗವಾಗಿ ಏ. 11ರಂದು ಸಂಜೆ 5ಕ್ಕೆ ತೆಲಂಗಾಣದ ಹೈದರಾಬಾದಿನ ಕುತ್ತಬುಳ್ಳಾಪುರ ಮುನ್ಸಿಪಾಲಿಟಿ ಕಚೇರಿ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಭೀಮರಾಜ ಸೇನಾ ಸಂಸ್ಥಾಪಕ ಅಧ್ಯಕ್ಷ ರಾಜೇಶ ಕಾಂಬಳೆ ತಿಳಿಸಿದರು.</p>.<p>ಸಮಾಜದಲ್ಲಿ ಸಮಾನತೆ, ಏಕತೆ ಮತ್ತು ನ್ಯಾಯದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ ಬಂಧು ಅಠಾವಳೆ, ಭಂತೆ ಹರ್ಷಬೋಧಿ (ಭಂತೆಜಿ) ಪಾಲ್ಗೊಳ್ಳುವರು. ಭೀಮರಾಜ ಸೇನಾದಿಂದ ಈಗಾಗಲೇ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ಮಹಾತ್ಮ ಫುಲೆ ಅವರ ಪರಂಪರೆಯನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಚಿಂತನೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಬನ್ನಿ, ಪ್ರೇರಣೆ ಪಡೆಯಿರಿ, ಬದಲಾವಣೆಯ ಭಾಗವಾಗಿರಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಬಳೆ ಕೋರಿದರು.</p>.<p>ಬೀಮರಾಜ ಸೇನಾ ಸಂಘಟನೆಯ ಪ್ರಮುಖರಾದ ಅಶೋಕ ಕಾಂಬಳೆ, ಪ್ರಲ್ಹಾದ ದೊಡ್ಡಿ, ಹರ್ಷಿತ ದಂಡೇಕರ್, ಪ್ರಕಾಶ ರಾವಣ, ದಿಲೀಪ ರೇಖಿ, ರಾಜು ಜಾತೋತ್, ಶಿವು ಸಾಗರ, ಅಶೋಕ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-33-1022342995</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>